ಗೋಪಾಲಕೃಷ್ಣ ನಾಗಿ ದರ್ಶನ ನೀಡಿದ ಉಡುಪಿಯ ಶ್ರೀಕೃಷ್ಣ -Vishwanews24

ಉಡುಪಿ: ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಆಚರಣೆ ನಡೆಯುತ್ತಿದೆ. ಕಡೆಗೋಲು ಶ್ರೀಕೃಷ್ಣನ ಊರು ಉಡುಪಿಯಲ್ಲಿ ಈ ಬಾರಿ ಅಷ್ಟಮಿ ಆಚರಣೆ ನಡೆದಿಲ್ಲ. ಉಡುಪಿ ಮಠದಲ್ಲಿ ಸೌರಮಾನ ಪದ್ಧತಿ ಆಚರಣೆ ಮಾಡುವುದರಿಂದ, ಮುಂದಿನ ತಿಂಗಳು ಶ್ರೀಕೃಷ್ಣಜನ್ಮಾಷ್ಟಮಿ ನಡೆಯಲಿದೆ. ದೇಶದಲ್ಲಿ ಆಚರಣೆ ಇರುವುದರಿಂದ ಉಡುಪಿ ಕಡೆಗೋಲು ಕೃಷ್ಣನಿಗೆ, ವಿಶೇಷ ಅಲಂಕಾರ ಮಾಡಲಾಗಿದೆ. ಗೋಪಾಲಕೃಷ್ಣ ನಾಗಿ ಕಡೆಗೋಲು ಕೃಷ್ಣ ದರ್ಶನ ಕೊಟ್ಟಿದ್ದಾನೆ.

ಚಾಂದ್ರಮಾನ ಪದ್ಧತಿಯಲ್ಲಿ ಹಬ್ಬಗಳನ್ನು ಆಚರಿಸುವ ಸಮುದಾಯಗಳು ಉಡುಪಿಯಲ್ಲಿದೆ. ಅವರೆಲ್ಲಾ ಅಷ್ಟಮಿ ಆಚರಣೆಯನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣಮಠದ ಕಡೆಗೋಲು ಶ್ರೀಕೃಷ್ಣನ ವಿಗ್ರಹಕ್ಕೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಗೋಪಾಲಕೃಷ್ಣನಾಗಿ ಕಡೆಗೋಲ ಕೃಷ್ಣ ಅವತಾರ ಎತ್ತಿದ್ದ. ಪರ್ಯಾಯ ಪೀಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಶ್ರೀಕೃಷ್ಣನಿಗೆ ವಿಶೇಷವಾದ ಅಲಂಕಾರವನ್ನು ನೆರವೇರಿಸಿದರು. ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

 

ಕಾಡಿನಲ್ಲಿ ಗೋವನ್ನು ಮೇಯಿಸುವ ಶ್ರೀಕೃಷ್ಣನಾಗಿ ಉಡುಪಿ ಕಡೆಗೋಲು ಕೃಷ್ಣ ಇಂದು ಭಕ್ತರಿಗೆ ದರ್ಶನ ಕೊಡುತ್ತಿದ್ದಾನೆ. ಶ್ರೀಕೃಷ್ಣ, ಮುಖ್ಯಪ್ರಾಣ ದೇವರುಗಳು, ಗರುಡ ದೇವರಿಗೆ ಅಲಂಕಾರಗಳನ್ನು ಮಾಡಿ ಅದಮಾರು ಮಠ ಫೋಟೋಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 11ರಂದು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ. ಕೊರೊನಾ ಲಾಕ್‍ಡೌನ್ ನಂತರ ಉಡುಪಿ ಕೃಷ್ಣಮಠ ಭಕ್ತರಿಗೆ ತೆರೆದುಕೊಂಡಿಲ್ಲ. ಮುಂದಿನ ಪರಿಸ್ಥಿತಿಗಳನ್ನು ನೋಡಿ ಶ್ರೀಕೃಷ್ಣ ಮಠವನ್ನು ತೆರೆಯುವುದು, ನಿಯಮಾವಳಿಗಳನ್ನು ರೂಪಿಸುವ ಬಗ್ಗೆ ಪರ್ಯಾಯ ಅದಮಾರು ಮಠ ತೀರ್ಮಾನ ತೆಗೆದುಕೊಳ್ಳಲಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

5 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

7 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

7 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

8 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

8 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

8 hours ago