ಉಜ್ಜೈನಿ: ಬಾಲಿವುಡ್ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ಗೆ ಮಧ್ಯ ಪ್ರದೇಶದಲ್ಲಿ ದೇಗುಲ ಪ್ರವೇಶ ನಿರಾಕರಿಸಲಾಗಿದೆ.
ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಿರ್ಧರಿಸಿದ್ದರು.
ಆದರೆ, ಬಜರಂಗ ದಳ ಕಾರ್ಯಕರ್ತರು ಈ ಜೋಡಿಗೆ ದೇಗುಲ ಪ್ರವೇಶ ನಿರಾಕರಿಸಿದ್ದಾರೆ. ಅಲ್ಲದೆ, ರಣಬೀರ್ ಮತ್ತು ಆಲಿಯಾ ಸ್ಥಳಕ್ಕೆ ಬರುತ್ತಿದ್ದಂತೆ ‘ಜೈ ಶ್ರೀರಾಮ್‘ ಘೋಷಣೆ ಕೂಗಿದ್ದಾರೆ.
ರಣಬೀರ್ ಅವರು ಕೆಲಸಮಯದ ಹಿಂದೆ, ಸಂದರ್ಶನವೊಂದರಲ್ಲಿ ಗೋಮಾಂಸ ತಿನ್ನಲು ಇಷ್ಟ ಎಂದು ಹೇಳಿಕೊಂಡಿದ್ದರು. ಹಿಂದುಗಳ ಭಾವನೆಗೆ ಅವರು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದೇಗುಲ ಪ್ರವೇಶ ನಿರಾಕರಿಸಿದ್ದಾರೆ.
ಬಜರಂಗದಳದವರ ವಿರುದ್ಧ ಲಾಠಿ ಚಾರ್ಜ್ ಮಾಡಿದರೂ, ಕಾರ್ಯಕರ್ತರು ಸ್ಥಳದಿಂದ ತೆರಳದೇ ಪ್ರತಿಭಟಿಸಿದ್ದಾರೆ. ಹೀಗಾಗಿ ರಣಬೀರ್ ಮತ್ತು ಆಲಿಯಾಗೆ ದೇಗುಲ ಪ್ರವೇಶ ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ : ಬಿಸಿ ಪಾಟೀಲ್ – Vishwanews24
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…