ಉಜ್ಜೈನಿ: ಬಾಲಿವುಡ್ನ ತಾರಾ ದಂಪತಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ಗೆ ಮಧ್ಯ ಪ್ರದೇಶದಲ್ಲಿ ದೇಗುಲ ಪ್ರವೇಶ ನಿರಾಕರಿಸಲಾಗಿದೆ.
ಮಧ್ಯ ಪ್ರದೇಶದ ಉಜ್ಜೈನಿಯಲ್ಲಿರುವ ಪ್ರಸಿದ್ಧ ಮಹಾಕಾಲ್ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಲು ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಿರ್ಧರಿಸಿದ್ದರು.
ಆದರೆ, ಬಜರಂಗ ದಳ ಕಾರ್ಯಕರ್ತರು ಈ ಜೋಡಿಗೆ ದೇಗುಲ ಪ್ರವೇಶ ನಿರಾಕರಿಸಿದ್ದಾರೆ. ಅಲ್ಲದೆ, ರಣಬೀರ್ ಮತ್ತು ಆಲಿಯಾ ಸ್ಥಳಕ್ಕೆ ಬರುತ್ತಿದ್ದಂತೆ ‘ಜೈ ಶ್ರೀರಾಮ್‘ ಘೋಷಣೆ ಕೂಗಿದ್ದಾರೆ.
ರಣಬೀರ್ ಅವರು ಕೆಲಸಮಯದ ಹಿಂದೆ, ಸಂದರ್ಶನವೊಂದರಲ್ಲಿ ಗೋಮಾಂಸ ತಿನ್ನಲು ಇಷ್ಟ ಎಂದು ಹೇಳಿಕೊಂಡಿದ್ದರು. ಹಿಂದುಗಳ ಭಾವನೆಗೆ ಅವರು ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ದೇಗುಲ ಪ್ರವೇಶ ನಿರಾಕರಿಸಿದ್ದಾರೆ.
ಬಜರಂಗದಳದವರ ವಿರುದ್ಧ ಲಾಠಿ ಚಾರ್ಜ್ ಮಾಡಿದರೂ, ಕಾರ್ಯಕರ್ತರು ಸ್ಥಳದಿಂದ ತೆರಳದೇ ಪ್ರತಿಭಟಿಸಿದ್ದಾರೆ. ಹೀಗಾಗಿ ರಣಬೀರ್ ಮತ್ತು ಆಲಿಯಾಗೆ ದೇಗುಲ ಪ್ರವೇಶ ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಮಳೆಯಿಂದ ಮುಳುಗಲು ಪ್ರಕೃತಿ ಕಾರಣವೇ ಹೊರತು ಸರ್ಕಾರ ಅಲ್ಲ : ಬಿಸಿ ಪಾಟೀಲ್ – Vishwanews24
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…