ದಕ್ಷಿಣ ಕನ್ನಡ

ಗೋಮಾಂಸ ತಿನ್ನುವವರಿಗೆ ಹಂದಿ ಸಾಕಲು ಕೊಡಿ : ಹಿಂದೂ ಜಾಗರಣ ವೇದಿಕೆ

ಮಂಗಳೂರು;  ಮುಂದೆ ಅಧಿಕಾರಕ್ಕೆ ಬರುವ ಸರಕಾರ ಗೋಮಾಂಸವನ್ನು ಸೇವಿಸುವವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತು ಯೋಚಿಸಬೇಕು. ಗೋಭಕ್ಷಕಣೆ ಮಾಡುವ ಪ್ರತಿ ಕುಟುಂಬಕ್ಕೆ ನಾಲ್ಕು ಹಂದಿಗಳನ್ನು ಸಾಕಲು ನೀಡುವ ವ್ಯವಸ್ಥೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕರಾವಳಿ ಭಾಗದಲ್ಲಿ ನಿರಂತರವಾಗಿ ಗೋವುಗಳನ್ನು ಹಟ್ಟಿಯಿಂದ ತಲವಾರು ಝಳಪಿಸಿ ರಾಜಾರೋಷವಾಗಿ ಕಳ್ಳತನ ಮಾಡಲಾಗುತ್ತಿದೆ. ಇಂತಹ ಘಟನೆಗಳು ಕರಾವಳಿ ಭಾಗದಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋಕಳ್ಳತನಕ್ಕೆ ಬೆಂಬಲ ಸೂಚಿಸುವ ರಾಜಕೀಯ ಪಕ್ಷಗಳು, ಬುದ್ಧಿಜೀವಿಗಳೂ ಸಾಕಷ್ಟು ಜನರಿದ್ದು, ಇವರೆಲ್ಲಾ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಗೋವುಗಳು ಹಿಂದೂಗಳ ಶ್ರದ್ಧೆಯ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮುಂದೆ ಅಧಿಕಾರಕ್ಕೆ ಬರುವ ಪಕ್ಷ ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧ ಮಾಡಬೇಕು. ಹಾಗೂ ಗೋಭಕ್ಷಕರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಮಾಡಬೇಕು ಎಂದು ಒತ್ತಾಯಿಸಿದರು. ಗೋ ಭಕ್ಷಣೆ ಮಾಡುವ ಕುಟುಂಬಗಳಿಗೆ ಸರಕಾರದ ವತಿಯಿಂದಲೇ ನಾಲ್ಕು ಹಂದಿಗಳನ್ನು ನೀಡಿ ಅದನ್ನು ಸಾಕುವ ವ್ಯವಸ್ಥೆಯನ್ನೂ ಸರಕಾರದಿಂದಲೇ ಮಾಡಿಸಬೇಕೆಂದು ಅವರು ಒತ್ತಾಯಿಸಿದರು. ಮಂಗಳೂರಿನ ಕೈರಂಗಳದ ಗೋ ಶಾಲೆಯಿಂದ ಗೋವುಗಳನ್ನು ಕದ್ದ ಗೋ ಕಳ್ಳರನ್ನು ಎರಡು ದಿನಗಳ ಒಳಗೆ ಪೋಲೀಸರು ಬಂಧಿಸದಿದ್ದರೆ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಸಂದರ್ಭದಲ್ಲಿ ಎಚ್ಚರಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago