ಕೋಲ್ಕತ್ತ: ಗೋಮಾಂಸ ತಿನ್ನುವವರು ಅದನ್ನು ಮಾತ್ರವೇ ಏಕೆ, ನಾಯಿ ಮಾಂಸವನ್ನೂ ತಿನ್ನಲಿ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ನಲ್ಲಿ ಸೋಮವಾರ ನಡೆದ ‘ಗೋ ಅಷ್ಟಮಿ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ‘ಕೆಲವು ಬುದ್ಧಿಜೀವಿಗಳು ರಸ್ತೆಯಲ್ಲಿ ಗೋಮಾಂಸ ತಿನ್ನುತ್ತಾರೆ. ಅಂತಹವರಿಗೆ ನಾಯಿ ಮಾಂಸವನ್ನೂ ತಿನ್ನಿ ಎಂದು ನಾನು ಹೇಳುತ್ತೇನೆ. ಅವರು ಯಾವುದೇ ಪ್ರಾಣಿಯ ಮಾಂಸ ತಿನ್ನಲಿ, ಅವರ ಆರೋಗ್ಯ ಚೆನ್ನಾಗಿರಲಿ. ಆದರೆ ರಸ್ತೆಯಲ್ಲೇಕೆ ತಿನ್ನಬೇಕು? ಅವರವರ ಮನೆಯಲ್ಲಿ ತಿನ್ನಲಿ’ ಎಂದು ಹೇಳಿದ್ದಾರೆ.
ಹಸು ನಮ್ಮ ತಾಯಿ. ನಾವು ಹಸುವಿನ ಹಾಲನ್ನು ಸೇವಿಸುವುದರ ಮೂಲಕ ಬದುಕುಳಿಡಿದ್ದೇನೆ, ಆದ್ದರಿಂದ ಯಾರಾದರೂ ನನ್ನ ತಾಯಿಯನ್ನು ನಿಂದಿಸಿದರೆ, ಅವರಿಗೆ ಏನು ಮಾಡಬೇಕು, ಅದನ್ನು ನಾನು ಮಾಡಿಯೇ ತೀರುತ್ತೇನೆ. ಭಾರತದ ಈ ಪುಣ್ಯ ಭೂಮಿಯಲ್ಲಿ ಹಸುವನ್ನು ಕೊಳ್ಳುವುದು ಮತ್ತು ಬೀಫ್ ಸೇವನೆ ಮಾಡುವುದು ಪಾಪ ಎಂದು ಹೇಳಿದ್ದಾರೆ.
ಹೇಳಿಕೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿ ನಾಯಕರು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಟಿಎಂಸಿ ಶಾಸಕಿ ನಿರ್ಮಲ್ ಘೋಷ್ ಆರೋಪಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…