ಕೋಲ್ಕತ್ತ: ಗೋಮಾಂಸ ತಿನ್ನುವವರು ಅದನ್ನು ಮಾತ್ರವೇ ಏಕೆ, ನಾಯಿ ಮಾಂಸವನ್ನೂ ತಿನ್ನಲಿ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ನಲ್ಲಿ ಸೋಮವಾರ ನಡೆದ ‘ಗೋ ಅಷ್ಟಮಿ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ‘ಕೆಲವು ಬುದ್ಧಿಜೀವಿಗಳು ರಸ್ತೆಯಲ್ಲಿ ಗೋಮಾಂಸ ತಿನ್ನುತ್ತಾರೆ. ಅಂತಹವರಿಗೆ ನಾಯಿ ಮಾಂಸವನ್ನೂ ತಿನ್ನಿ ಎಂದು ನಾನು ಹೇಳುತ್ತೇನೆ. ಅವರು ಯಾವುದೇ ಪ್ರಾಣಿಯ ಮಾಂಸ ತಿನ್ನಲಿ, ಅವರ ಆರೋಗ್ಯ ಚೆನ್ನಾಗಿರಲಿ. ಆದರೆ ರಸ್ತೆಯಲ್ಲೇಕೆ ತಿನ್ನಬೇಕು? ಅವರವರ ಮನೆಯಲ್ಲಿ ತಿನ್ನಲಿ’ ಎಂದು ಹೇಳಿದ್ದಾರೆ.
ಹಸು ನಮ್ಮ ತಾಯಿ. ನಾವು ಹಸುವಿನ ಹಾಲನ್ನು ಸೇವಿಸುವುದರ ಮೂಲಕ ಬದುಕುಳಿಡಿದ್ದೇನೆ, ಆದ್ದರಿಂದ ಯಾರಾದರೂ ನನ್ನ ತಾಯಿಯನ್ನು ನಿಂದಿಸಿದರೆ, ಅವರಿಗೆ ಏನು ಮಾಡಬೇಕು, ಅದನ್ನು ನಾನು ಮಾಡಿಯೇ ತೀರುತ್ತೇನೆ. ಭಾರತದ ಈ ಪುಣ್ಯ ಭೂಮಿಯಲ್ಲಿ ಹಸುವನ್ನು ಕೊಳ್ಳುವುದು ಮತ್ತು ಬೀಫ್ ಸೇವನೆ ಮಾಡುವುದು ಪಾಪ ಎಂದು ಹೇಳಿದ್ದಾರೆ.
ಹೇಳಿಕೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿ ನಾಯಕರು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಟಿಎಂಸಿ ಶಾಸಕಿ ನಿರ್ಮಲ್ ಘೋಷ್ ಆರೋಪಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…