ಉಡುಪಿ : ಗೋಮಾಂಸದ ಬದಲು ಕತ್ತೆ, ನಾಯಿ, ಕೋಣದ ಮಾಂಸವನ್ನು ಬೇಕಾದರೂ ತಿನ್ನಿ. ಗೋಮಾಂಸ ಸೇವನೆಯಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂದು ಬಾಬಾ ರಾಮದೇವ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಉಡುಪಿಯಲ್ಲಿ ನಡೆದ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಬಾಬಾ ರಾಮದೇವ್, ಬಹುಜನ ಸಮಾಜವಾದಿ ಪಕ್ಷದವರು ತಮ್ಮನ್ನು ದೇಶದ ಮೂಲ ನಿವಾಸಿಗಳು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಬ್ರಾಹ್ಮಣರು ಸೇರಿದಂತೆ ಇತರರು ವಿದೇಶಿ ಮೂಲದವರು ಎಂದು ನಿಂದಿಸುತ್ತಿದ್ದಾರೆ. ಭಾರದಲ್ಲಿರುವ ಪ್ರತಿಯೊಬ್ಬರೂ ದೇಶದ ಮೂಲ ನಿವಾಸಿಗಳು ಎಂಬ ಸತ್ಯವನ್ನು ಅರಿಯಬೇಕಿದೆ ಎಂದು ತಿರುಗೇಟು ನೀಡಿದರು.
ದೇಶದ ಜನಸಂಖ್ಯೆ ಮಿತಿಮೀರುತ್ತಿದೆ. ಮಿತಿ ಇಲ್ಲದೇ 8-10 ಮಕ್ಕಳನ್ನು ಮಾಡಿಕೊಳ್ಳುತ್ತಿದ್ದಾರೆ. ದೇಶ ಸಮೃದ್ಧವಾಗಿರಬೇಕಾದರೇ, ವಿಕಾಸದ ಹಾದಿಯಲ್ಲಿ ಸಾಗಬೇಕಾಗುತ್ತದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣಕ್ಕೆ ಕಠಿಣ ಕಾನೂನು ಜಾರಿಗೆ ಬರಲಿ ಎಂದು ಒತ್ತಾಯಿಸಿದ ಅವರು, ಗೋಮಾಂಸ ಸೇವೆಯಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ. ಇದರ ಬದಲು ಕತ್ತೆ, ನಾಯಿ, ಕೋಣದ ಮಾಂಸವನ್ನು ಬೇಕಾದರೂ ತಿನ್ನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…