ಉಡುಪಿ : ಗೋಮಾಂಸದ ಬದಲು ಕತ್ತೆ, ನಾಯಿ, ಕೋಣದ ಮಾಂಸವನ್ನು ಬೇಕಾದರೂ ತಿನ್ನಿ. ಗೋಮಾಂಸ ಸೇವನೆಯಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂದು ಬಾಬಾ ರಾಮದೇವ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಉಡುಪಿಯಲ್ಲಿ ನಡೆದ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಬಾಬಾ ರಾಮದೇವ್, ಬಹುಜನ ಸಮಾಜವಾದಿ ಪಕ್ಷದವರು ತಮ್ಮನ್ನು ದೇಶದ ಮೂಲ ನಿವಾಸಿಗಳು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಬ್ರಾಹ್ಮಣರು ಸೇರಿದಂತೆ ಇತರರು ವಿದೇಶಿ ಮೂಲದವರು ಎಂದು ನಿಂದಿಸುತ್ತಿದ್ದಾರೆ. ಭಾರದಲ್ಲಿರುವ ಪ್ರತಿಯೊಬ್ಬರೂ ದೇಶದ ಮೂಲ ನಿವಾಸಿಗಳು ಎಂಬ ಸತ್ಯವನ್ನು ಅರಿಯಬೇಕಿದೆ ಎಂದು ತಿರುಗೇಟು ನೀಡಿದರು.
ದೇಶದ ಜನಸಂಖ್ಯೆ ಮಿತಿಮೀರುತ್ತಿದೆ. ಮಿತಿ ಇಲ್ಲದೇ 8-10 ಮಕ್ಕಳನ್ನು ಮಾಡಿಕೊಳ್ಳುತ್ತಿದ್ದಾರೆ. ದೇಶ ಸಮೃದ್ಧವಾಗಿರಬೇಕಾದರೇ, ವಿಕಾಸದ ಹಾದಿಯಲ್ಲಿ ಸಾಗಬೇಕಾಗುತ್ತದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣಕ್ಕೆ ಕಠಿಣ ಕಾನೂನು ಜಾರಿಗೆ ಬರಲಿ ಎಂದು ಒತ್ತಾಯಿಸಿದ ಅವರು, ಗೋಮಾಂಸ ಸೇವೆಯಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ. ಇದರ ಬದಲು ಕತ್ತೆ, ನಾಯಿ, ಕೋಣದ ಮಾಂಸವನ್ನು ಬೇಕಾದರೂ ತಿನ್ನಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…