Featured

ಗೋಮೂತ್ರ, ಸಗಣಿಯ ಸೋಪ್​, ಫೇಸ್​ಪ್ಯಾಕ್​ಗಳು ಶೀಘ್ರದಲ್ಲೇ ಅಮೆಜಾನ್​ನಲ್ಲಿ ಲಭ್ಯ

ಮಥುರಾ: ಹಸುವಿನ ಮೂತ್ರ, ಸಗಣಿಯಿಂದ ತಯಾರಿಸಿದ ಸೋಪು, ಫೇಸ್​ಪ್ಯಾಕ್​, ಶಾಂಪೂ ಹಾಗೂ ಔಷಧೀಯ ವಸ್ತುಗಳನ್ನು ಶೀಘ್ರವೇ ಅಮೆಜಾನ್​ನಲ್ಲಿ ಸಿಗಲಿದೆ ಎಂದು ಆರ್​ಎಸ್ಎಸ್​ ಬೆಂಬಲಿತ ಕೇಂದ್ರವೊಂದು ತಿಳಿಸಿದೆ.

ಮಥುರಾದ ಫರಾಹ್​ ಪಟ್ಟಣದಲ್ಲಿ ಆರ್​ಎಸ್​ಎಸ್​ನಿಂದ ನಡೆಸಲಾಗುತ್ತಿರುವ ದೀನ್​ ದಯಾಳ್​ ದಾಮ ಕೇಂದ್ರ ಗೋಮೂತ್ರ, ಸಗಣಿಯಿಂದ ತಯಾರಿಸಲಾದ ಉತ್ಪನ್ನಗಳು, ವಿವಿಧ ತರಹದ ಬಟ್ಟೆಗಳನ್ನು ಬೇರೆ ವೆಬ್​ಸೈಟ್​ ಮೂಲಕ ಮಾರಾಟ ಮಾಡುತ್ತಿತ್ತು.

ನಾವು ಅಮೇಜಾನ್​ ಸಂಸ್ಥೆಯೊಂದಿಗೆ ಕೆಲವು ದಿನಗಳ ಹಿಂದೆ ಚರ್ಚೆ ಮಾಡಿದ್ದೇವೆ. ಇನ್ನೊಂದು ವಾರದಲ್ಲಿ ನಮ್ಮ ಉತ್ಪನ್ನಗಳು ಅಮೆಜಾನ್​ ಆನ್​ಲೈನ್​ ಸಂಸ್ಥೆಯಲ್ಲಿ ಸಿಗಲಿದೆ. ಜನರು ಅದನ್ನು ಸುಲಭವಾಗಿ ಪಡೆಯಬಹುದು ಎಂದು ಮ್ಯಾನೇಜರ್​ ಘನಾಶ್ಯಾಮ್​ ಗುಪ್ತಾ ತಿಳಿಸಿದ್ದಾರೆ. ಯಾವಾಗ ನಮ್ಮ ಕೇಂದ್ರದ ಉತ್ಪನ್ನಗಳ ಮಾರಾಟ ಶುರುವಾಗುತ್ತದೆ ಎಂಬುದನ್ನು ಅಮೆಜಾನ್​ನವರು ತಿಳಿಸುತ್ತಾರೆ ಎಂದಿದ್ದಾರೆ.

ಗುಪ್ತಾ ಅವರು 20 ವರ್ಷಗಳಿಂದ ದೀನ್ ದಯಾಳ್​ ಧಾಮದಲ್ಲಿ ಇದ್ದಾರೆ. ಇಲ್ಲಿನ ಸುತ್ತಮುತ್ತಲ ಹಳ್ಳಿಗಳ ಮಹಿಳೆಯರು ಧಾಮದಲ್ಲಿ ಕೆಲಸ ಮಾಡುತ್ತಾರೆ. ಹಾಗೇ ಇಲ್ಲಿ ದೀನ ದಯಾಳ್ ಕಾಮಧೇನು ಗೋಶಾಲಾ ಫಾರ್ಮಸಿಯೂ ಇದೆ. ವೈರಲ್​ ಫಿವರ್​ , ರೋಗನಿರೋಧಕ ಶಕ್ತಿ ಹೆಚ್ಚಿಸುವ, ಪಂಚಗವ್ಯ ಚೂರ್ಣ, ಚ್ಯವನಪ್ರಾಶ ಮತ್ತಿತರ ಔಷಧಗಳು ಇಲ್ಲಿ ಸಿಗುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago