Featured

ಗೋಮೂತ್ರ, ಸಗಣಿಯ ಸೋಪ್​, ಫೇಸ್​ಪ್ಯಾಕ್​ಗಳು ಶೀಘ್ರದಲ್ಲೇ ಅಮೆಜಾನ್​ನಲ್ಲಿ ಲಭ್ಯ

ಮಥುರಾ: ಹಸುವಿನ ಮೂತ್ರ, ಸಗಣಿಯಿಂದ ತಯಾರಿಸಿದ ಸೋಪು, ಫೇಸ್​ಪ್ಯಾಕ್​, ಶಾಂಪೂ ಹಾಗೂ ಔಷಧೀಯ ವಸ್ತುಗಳನ್ನು ಶೀಘ್ರವೇ ಅಮೆಜಾನ್​ನಲ್ಲಿ ಸಿಗಲಿದೆ ಎಂದು ಆರ್​ಎಸ್ಎಸ್​ ಬೆಂಬಲಿತ ಕೇಂದ್ರವೊಂದು ತಿಳಿಸಿದೆ.

ಮಥುರಾದ ಫರಾಹ್​ ಪಟ್ಟಣದಲ್ಲಿ ಆರ್​ಎಸ್​ಎಸ್​ನಿಂದ ನಡೆಸಲಾಗುತ್ತಿರುವ ದೀನ್​ ದಯಾಳ್​ ದಾಮ ಕೇಂದ್ರ ಗೋಮೂತ್ರ, ಸಗಣಿಯಿಂದ ತಯಾರಿಸಲಾದ ಉತ್ಪನ್ನಗಳು, ವಿವಿಧ ತರಹದ ಬಟ್ಟೆಗಳನ್ನು ಬೇರೆ ವೆಬ್​ಸೈಟ್​ ಮೂಲಕ ಮಾರಾಟ ಮಾಡುತ್ತಿತ್ತು.

ನಾವು ಅಮೇಜಾನ್​ ಸಂಸ್ಥೆಯೊಂದಿಗೆ ಕೆಲವು ದಿನಗಳ ಹಿಂದೆ ಚರ್ಚೆ ಮಾಡಿದ್ದೇವೆ. ಇನ್ನೊಂದು ವಾರದಲ್ಲಿ ನಮ್ಮ ಉತ್ಪನ್ನಗಳು ಅಮೆಜಾನ್​ ಆನ್​ಲೈನ್​ ಸಂಸ್ಥೆಯಲ್ಲಿ ಸಿಗಲಿದೆ. ಜನರು ಅದನ್ನು ಸುಲಭವಾಗಿ ಪಡೆಯಬಹುದು ಎಂದು ಮ್ಯಾನೇಜರ್​ ಘನಾಶ್ಯಾಮ್​ ಗುಪ್ತಾ ತಿಳಿಸಿದ್ದಾರೆ. ಯಾವಾಗ ನಮ್ಮ ಕೇಂದ್ರದ ಉತ್ಪನ್ನಗಳ ಮಾರಾಟ ಶುರುವಾಗುತ್ತದೆ ಎಂಬುದನ್ನು ಅಮೆಜಾನ್​ನವರು ತಿಳಿಸುತ್ತಾರೆ ಎಂದಿದ್ದಾರೆ.

ಗುಪ್ತಾ ಅವರು 20 ವರ್ಷಗಳಿಂದ ದೀನ್ ದಯಾಳ್​ ಧಾಮದಲ್ಲಿ ಇದ್ದಾರೆ. ಇಲ್ಲಿನ ಸುತ್ತಮುತ್ತಲ ಹಳ್ಳಿಗಳ ಮಹಿಳೆಯರು ಧಾಮದಲ್ಲಿ ಕೆಲಸ ಮಾಡುತ್ತಾರೆ. ಹಾಗೇ ಇಲ್ಲಿ ದೀನ ದಯಾಳ್ ಕಾಮಧೇನು ಗೋಶಾಲಾ ಫಾರ್ಮಸಿಯೂ ಇದೆ. ವೈರಲ್​ ಫಿವರ್​ , ರೋಗನಿರೋಧಕ ಶಕ್ತಿ ಹೆಚ್ಚಿಸುವ, ಪಂಚಗವ್ಯ ಚೂರ್ಣ, ಚ್ಯವನಪ್ರಾಶ ಮತ್ತಿತರ ಔಷಧಗಳು ಇಲ್ಲಿ ಸಿಗುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago