Featured

ಗೋಮೂತ್ರ, ಸಗಣಿಯ ಸೋಪ್​, ಫೇಸ್​ಪ್ಯಾಕ್​ಗಳು ಶೀಘ್ರದಲ್ಲೇ ಅಮೆಜಾನ್​ನಲ್ಲಿ ಲಭ್ಯ

ಮಥುರಾ: ಹಸುವಿನ ಮೂತ್ರ, ಸಗಣಿಯಿಂದ ತಯಾರಿಸಿದ ಸೋಪು, ಫೇಸ್​ಪ್ಯಾಕ್​, ಶಾಂಪೂ ಹಾಗೂ ಔಷಧೀಯ ವಸ್ತುಗಳನ್ನು ಶೀಘ್ರವೇ ಅಮೆಜಾನ್​ನಲ್ಲಿ ಸಿಗಲಿದೆ ಎಂದು ಆರ್​ಎಸ್ಎಸ್​ ಬೆಂಬಲಿತ ಕೇಂದ್ರವೊಂದು ತಿಳಿಸಿದೆ.

ಮಥುರಾದ ಫರಾಹ್​ ಪಟ್ಟಣದಲ್ಲಿ ಆರ್​ಎಸ್​ಎಸ್​ನಿಂದ ನಡೆಸಲಾಗುತ್ತಿರುವ ದೀನ್​ ದಯಾಳ್​ ದಾಮ ಕೇಂದ್ರ ಗೋಮೂತ್ರ, ಸಗಣಿಯಿಂದ ತಯಾರಿಸಲಾದ ಉತ್ಪನ್ನಗಳು, ವಿವಿಧ ತರಹದ ಬಟ್ಟೆಗಳನ್ನು ಬೇರೆ ವೆಬ್​ಸೈಟ್​ ಮೂಲಕ ಮಾರಾಟ ಮಾಡುತ್ತಿತ್ತು.

ನಾವು ಅಮೇಜಾನ್​ ಸಂಸ್ಥೆಯೊಂದಿಗೆ ಕೆಲವು ದಿನಗಳ ಹಿಂದೆ ಚರ್ಚೆ ಮಾಡಿದ್ದೇವೆ. ಇನ್ನೊಂದು ವಾರದಲ್ಲಿ ನಮ್ಮ ಉತ್ಪನ್ನಗಳು ಅಮೆಜಾನ್​ ಆನ್​ಲೈನ್​ ಸಂಸ್ಥೆಯಲ್ಲಿ ಸಿಗಲಿದೆ. ಜನರು ಅದನ್ನು ಸುಲಭವಾಗಿ ಪಡೆಯಬಹುದು ಎಂದು ಮ್ಯಾನೇಜರ್​ ಘನಾಶ್ಯಾಮ್​ ಗುಪ್ತಾ ತಿಳಿಸಿದ್ದಾರೆ. ಯಾವಾಗ ನಮ್ಮ ಕೇಂದ್ರದ ಉತ್ಪನ್ನಗಳ ಮಾರಾಟ ಶುರುವಾಗುತ್ತದೆ ಎಂಬುದನ್ನು ಅಮೆಜಾನ್​ನವರು ತಿಳಿಸುತ್ತಾರೆ ಎಂದಿದ್ದಾರೆ.

ಗುಪ್ತಾ ಅವರು 20 ವರ್ಷಗಳಿಂದ ದೀನ್ ದಯಾಳ್​ ಧಾಮದಲ್ಲಿ ಇದ್ದಾರೆ. ಇಲ್ಲಿನ ಸುತ್ತಮುತ್ತಲ ಹಳ್ಳಿಗಳ ಮಹಿಳೆಯರು ಧಾಮದಲ್ಲಿ ಕೆಲಸ ಮಾಡುತ್ತಾರೆ. ಹಾಗೇ ಇಲ್ಲಿ ದೀನ ದಯಾಳ್ ಕಾಮಧೇನು ಗೋಶಾಲಾ ಫಾರ್ಮಸಿಯೂ ಇದೆ. ವೈರಲ್​ ಫಿವರ್​ , ರೋಗನಿರೋಧಕ ಶಕ್ತಿ ಹೆಚ್ಚಿಸುವ, ಪಂಚಗವ್ಯ ಚೂರ್ಣ, ಚ್ಯವನಪ್ರಾಶ ಮತ್ತಿತರ ಔಷಧಗಳು ಇಲ್ಲಿ ಸಿಗುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

6 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

7 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

7 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

7 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago