Featured

ಗೋರಕ್ಷಕರಿಂದ ವ್ಯಕ್ತಿಯ ಹತ್ಯೆ – ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ  – Vishwanews24

ಗೋರಕ್ಷಕರಿಂದ ವ್ಯಕ್ತಿಯ ಹತ್ಯೆ; ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ

ಮಂಡ್ಯದ ವ್ಯಕ್ತಿಯೊಬ್ಬನನ್ನು ಗೋರಕ್ಷಕರ ಗುಂಪೊಂದು ಶುಕ್ರವಾರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರು: ಮಂಡ್ಯದ ವ್ಯಕ್ತಿಯೊಬ್ಬನನ್ನು ಗೋರಕ್ಷಕರ ಗುಂಪೊಂದು ಶುಕ್ರವಾರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸಂತ್ರಸ್ತ ಇದ್ರೀಸ್ ಪಾಷಾ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಪುನೀತ್ ಕೆರೆಹಳ್ಳಿ ನೇತೃತ್ವದ ಗೋರಕ್ಷಕರ ಗುಂಪೊಂದು ಆತನನ್ನು ಕೊಂದು ಹಾಕಿತ್ತು.

ಘಟನೆಯನ್ನು ಖಂಡಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಬಿಜೆಪಿ ಗೂಂಡಾ ಸಂಸ್ಕೃತಿಗೆ ಪ್ರೋತ್ಸಾಹ ನೀಡುತ್ತಿದ್ದು, ಆರಗ ಅವರಿಗೆ ಗೃಹ ಸಚಿವರಾಗಿ ಉಳಿಯುವ ನೈತಿಕ ಹಕ್ಕು ಇಲ್ಲ ಎಂದರು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಸಮರ್ಥ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಈ ಸಾವಿಗೆ ನೇರ ಹೊಣೆ. ಈ ಅಸಮರ್ಥ ಸರ್ಕಾರದ ಅಡಿಯಲ್ಲಿ ಜನರು ಸುರಕ್ಷತೆ ಮತ್ತು ಭದ್ರತೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಅವರನ್ನು ಮೊದಲು ಸಚಿವ ಸಂಪುಟದಿಂದ ಹೊರಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಅವರೊಂದಿಗೆ ಅನೇಕ ಬಿಜೆಪಿ ನಾಯಕರು ಮತ್ತು ಸಚಿವರಿರುವ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

‘ಇದು [ಕೊಲೆ] ಕೋಮು ಉದ್ವಿಗ್ನತೆಯನ್ನು ಉಲ್ಬಣಗೊಳಿಸಲು ಮತ್ತು ಮತದಾರರನ್ನು ಧ್ರುವೀಕರಣಗೊಳಿಸಲು ಒಂದು ಸಂಯೋಜಿತ ಕೃತ್ಯದಂತೆ ತೋರುತ್ತಿದೆ’ ಎಂದು ಹೇಳಿದರು.

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

18 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

31 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

44 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago