ಅಲಹಾಬಾದ್: ಗೋವುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಗೋಹತ್ಯೆ ತಡೆ ಕಾಯ್ದೆಯ ಅಡಿ ಬಂಧನಕ್ಕೆ ಒಳಗಾಗಿದ್ದ ಜಾವೇದ್ ಎಂಬಾತನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಶೇಖರ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕುಗಳ ಪೈಕಿ ಒಂದು ಎಂದು ಪರಿಗಣಿಸಬೇಕು. ಒಂದು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆ ಉಂಟಾದರೆ ದೇಶ ದುರ್ಬಲವಾಗುತ್ತದೆ ಎನ್ನುವುದು ನಮಗೆ ತಿಳಿದಿದೆ ಎಂದು ಅಭಿಪ್ರಾಯಪಟ್ಟಿದೆ.
ಆದೇಶದಲ್ಲಿ ಏನಿದೆ?
ಹಸುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ. ಪ್ರಾಚೀನ ಗ್ರಂಥಗಳಾದ ವೇದ ಮತ್ತು ಮಹಾಭಾರತಗಳಲ್ಲಿ ಭಾರತೀಯ ಸಂಸ್ಕೃತಿಯನ್ನು ವಿವರಿಸುವ ಪ್ರಮುಖ ಭಾಗವಾಗಿ ಗೋವನ್ನು ತೋರಿಸಲಾಗಿದೆ ಎಂದು 12 ಪುಟಗಳ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಗೋಮಾಂಸ ತಿನ್ನುವವರಿಗೆ ಮಾತ್ರ ಮೂಲಭೂತ ಹಕ್ಕು ಅನ್ವಯಿಸುವುದಿಲ್ಲ. ಗೋವನ್ನು ಪೂಜಿಸುವವರು, ಆರ್ಥಿಕವಾಗಿ ಹಸುಗಳ ಮೇಲೆ ಅವಲಂಬಿತರಾಗಿರುವವರು ಸಹ ಅರ್ಥಪೂರ್ಣವಾದ ಜೀವನವನ್ನು ನಡೆಸುವರೂ ಹಕ್ಕನ್ನು ಹೊಂದಿದ್ದಾರೆ.
ಗೋವುಗಳು ಕಲ್ಯಾಣವಾದಾಗ ಮಾತ್ರ ದೇಶವು ಸುರಕ್ಷಿತವಾಗಿರುತ್ತದೆ ಮತ್ತು ಆಗ ದೇಶವು ಏಳಿಗೆಯಾಗುತ್ತದೆ. ಜೀವಿಸುವ ಹಕ್ಕು, ಹತ್ಯೆಗೈಯುವ ಹಕ್ಕಿಗಿಂತಲೂ ದೊಡ್ಡದು. ಗೋಮಾಂಸ ಸೇವನೆಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ. ಗೋಶಾಲೆಗಳ ಹೆಸರಿನಲ್ಲಿ ಮೋಸ ಮಾಡುತ್ತಿರುವವರ ವಿರುದ್ಧ ಕಾನೂನು ಜಾರಿ ಮಾಡಬೇಕು. ಇದನ್ನೂ ಓದಿ : ಲೀಕ್ ಆಯ್ತು ಜೋ ಬೈಡನ್- ಅಶ್ರಫ್ ಘನಿ ಫೋನ್ ಸಂಭಾಷಣೆ
ಜಾವೇದ್ (59) ಮಾಂಸಕ್ಕಾಗಿ ಹಸುವನ್ನು ಕದ್ದು ಹತ್ಯೆ ಮಾಡಿದ್ದ. ಇದು ಅರ್ಜಿದಾರರ ಮೊದಲ ಅಪರಾಧವಲ್ಲ. ಈ ಹಿಂದೆಯೂ ಈತ ಗೋಹತ್ಯೆಯನ್ನು ಎಸಗಿ ಸಮಾಜದ ಸಾಮರಸ್ಯವನ್ನು ಕದಡಿದ್ದ ಎಂದು ನ್ಯಾಯಮೂರ್ತಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…