ಅಲಹಾಬಾದ್: ಗೋವುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಗೋಹತ್ಯೆ ತಡೆ ಕಾಯ್ದೆಯ ಅಡಿ ಬಂಧನಕ್ಕೆ ಒಳಗಾಗಿದ್ದ ಜಾವೇದ್ ಎಂಬಾತನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾ. ಶೇಖರ್ ಯಾದವ್ ಅವರಿದ್ದ ಏಕಸದಸ್ಯ ಪೀಠ, ಗೋವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕುಗಳ ಪೈಕಿ ಒಂದು ಎಂದು ಪರಿಗಣಿಸಬೇಕು. ಒಂದು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆ ಉಂಟಾದರೆ ದೇಶ ದುರ್ಬಲವಾಗುತ್ತದೆ ಎನ್ನುವುದು ನಮಗೆ ತಿಳಿದಿದೆ ಎಂದು ಅಭಿಪ್ರಾಯಪಟ್ಟಿದೆ.
ಆದೇಶದಲ್ಲಿ ಏನಿದೆ?
ಹಸುಗಳು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ. ಪ್ರಾಚೀನ ಗ್ರಂಥಗಳಾದ ವೇದ ಮತ್ತು ಮಹಾಭಾರತಗಳಲ್ಲಿ ಭಾರತೀಯ ಸಂಸ್ಕೃತಿಯನ್ನು ವಿವರಿಸುವ ಪ್ರಮುಖ ಭಾಗವಾಗಿ ಗೋವನ್ನು ತೋರಿಸಲಾಗಿದೆ ಎಂದು 12 ಪುಟಗಳ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಗೋಮಾಂಸ ತಿನ್ನುವವರಿಗೆ ಮಾತ್ರ ಮೂಲಭೂತ ಹಕ್ಕು ಅನ್ವಯಿಸುವುದಿಲ್ಲ. ಗೋವನ್ನು ಪೂಜಿಸುವವರು, ಆರ್ಥಿಕವಾಗಿ ಹಸುಗಳ ಮೇಲೆ ಅವಲಂಬಿತರಾಗಿರುವವರು ಸಹ ಅರ್ಥಪೂರ್ಣವಾದ ಜೀವನವನ್ನು ನಡೆಸುವರೂ ಹಕ್ಕನ್ನು ಹೊಂದಿದ್ದಾರೆ.
ಗೋವುಗಳು ಕಲ್ಯಾಣವಾದಾಗ ಮಾತ್ರ ದೇಶವು ಸುರಕ್ಷಿತವಾಗಿರುತ್ತದೆ ಮತ್ತು ಆಗ ದೇಶವು ಏಳಿಗೆಯಾಗುತ್ತದೆ. ಜೀವಿಸುವ ಹಕ್ಕು, ಹತ್ಯೆಗೈಯುವ ಹಕ್ಕಿಗಿಂತಲೂ ದೊಡ್ಡದು. ಗೋಮಾಂಸ ಸೇವನೆಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ. ಗೋಶಾಲೆಗಳ ಹೆಸರಿನಲ್ಲಿ ಮೋಸ ಮಾಡುತ್ತಿರುವವರ ವಿರುದ್ಧ ಕಾನೂನು ಜಾರಿ ಮಾಡಬೇಕು. ಇದನ್ನೂ ಓದಿ : ಲೀಕ್ ಆಯ್ತು ಜೋ ಬೈಡನ್- ಅಶ್ರಫ್ ಘನಿ ಫೋನ್ ಸಂಭಾಷಣೆ
ಜಾವೇದ್ (59) ಮಾಂಸಕ್ಕಾಗಿ ಹಸುವನ್ನು ಕದ್ದು ಹತ್ಯೆ ಮಾಡಿದ್ದ. ಇದು ಅರ್ಜಿದಾರರ ಮೊದಲ ಅಪರಾಧವಲ್ಲ. ಈ ಹಿಂದೆಯೂ ಈತ ಗೋಹತ್ಯೆಯನ್ನು ಎಸಗಿ ಸಮಾಜದ ಸಾಮರಸ್ಯವನ್ನು ಕದಡಿದ್ದ ಎಂದು ನ್ಯಾಯಮೂರ್ತಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…