ರಾಜಸ್ಥಾನ : ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕೆಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿದನ್ನು ಅಖಿಲ ಭಾರತೀಯ ಅಖಾರ ಪರಿಷತ್ (ಎ ಬಿ ಎ ಪಿ )ನ ಅಧ್ಯಕ್ಷ ಮಹಾಂತ್ ನರೇಂದ್ರ ಗಿರಿ ಸ್ವಾಗತಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಗಿರಿ, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕೆಂದು ಅಲಹಾಬಾದ್ ಹೈಕೋರ್ಟ್ ಹೇಳಿರುವುದು ಸೂಕ್ತವಾಗಿದೆ. ಕೇಂದ್ರ ಸರ್ಕಾರ ಈ ಸಂಬಂಧಿ ಕಾನೂನನ್ನು ಅತಿ ಶೀಘ್ರದಲ್ಲಿ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
“ಕೇಂದ್ರ ಸರ್ಕಾರವು ಕಾನೂನನ್ನು ರೂಪಿಸಲು, ಸಂಸತ್ತಿನಲ್ಲಿ ಈ ವಿಚಾರದ ಕುರಿತು ಮಂಡಿಸಲು ಮತ್ತು ಇದನ್ನು ಅಂಗೀಕರಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಸಂಬಂಧಿಸಂದೆ ಕೇಂದ್ರ ಸರ್ಕಾರ ಒಂದು ಕಾನೂನನ್ನು ಜಾರಿಗೊಳಿಸುವುದರಿಂದ ಹಾಗೂ ಹಸುಗಳು ರಾಷ್ಟ್ರೀಯ ಪ್ರಾಣಿಯಾದಾಗ ಜನರು ಗೋವುಗಳ ಮೇಲೆ ಹೆಚ್ಚು ಗೌರವ ಹಾಗೂ ಭಕ್ತಿ ಭಾವ ಬರುತ್ತದೆ” ಎಂದು ಅವರು ಹೇಳಿದ್ದಾರೆ.
ಭಾರತೀಯ ಸಂಸ್ಕೃತಿಯಲ್ಲಿ ಗೋವು ಪ್ರಮುಖವಾದ ಭಾಗವಾಗಿದೆ ಎಂದು ತಿಳಿಸಿರುವ ಅಲಹಬಾದ್ ಹೈಕೋರ್ಟ್ ಪೀಠ, ಗೋ ಮಾಂಸ ಭಕ್ಷಣೆ ಮಾಡುವವರಿಗಷ್ಟೇ ಅದು ಮೂಲಭೂತ ಹಕ್ಕಲ್ಲ. ಆದರೆ ಗೋವುಗಳನ್ನು ಯಾರು ಪೂಜಿಸುತ್ತಾರೋ ಹಾಗೂ ಗೋವಿನ ಮೇಲೆ ಆರ್ಥಿಕವಾಗಿ ಅವಲಂಬಿತ ರಾಗಿರುವವರ ಮೂಲಭೂತ ಹಕ್ಕಾಗಿದೆ ಎಂದು ಅಲಹಾಬಾದ್ ಹೈ ಕೋರ್ಟ್ ಹೇಳಿರುವುದಕ್ಕೆ ಗಿರಿ ಸಂತೋಷ ವ್ಯಕ್ತ ಪಡಿಸಿದ್ದಲ್ಲದೇ, ಗೋವು ಕೇವಲ ಪ್ರಾಣಿ ಮಾತ್ರವಲ್ಲ. ಗೋವು ನಮ್ಮ ಮಾತೆ. ಹಸುಗಳನ್ನು ಪೂಜಿಸುವುದು ಮತ್ತು ಅವುಗಳ ಸೇವೆ ಮಾಡುವುದು ನಮ್ಮ ಜವಾಬ್ದಾರಿ ಎಂದಿದ್ದಾರೆ.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…