Featured

ಗೋವಾ ಚುನಾವಣೆ : ಆಮ್​ ಆದ್ಮಿ ಪಕ್ಷದ ಅಮಿತ್ ಪಾಲೇಕರ್​ ಸಿಎಂ ಅಭ್ಯರ್ಥಿ : ಅರವಿಂದ್ ಕೇಜ್ರಿವಾಲ್ ಘೋಷಣೆ – Vishwanews24

ಗೋವಾ ಚುನಾವಣೆ : ಆಮ್​ ಆದ್ಮಿ ಪಕ್ಷದ  ಅಮಿತ್ ಪಾಲೇಕರ್​ ಸಿಎಂ ಅಭ್ಯರ್ಥಿ : ಅರವಿಂದ್ ಕೇಜ್ರಿವಾಲ್ ಘೋಷಣೆ – Vishwanews24

ಪಣಜಿ : ನಿನ್ನೆ ಪಂಜಾಬ್ ವಿಧಾನಸಭೆಯ ಸಿಎಂ ಅಭ್ಯರ್ಥಿ‌ಯನ್ನ ಘೋಷಿಸಿದ್ದ ಆಮ್ ಆದ್ಮಿ ಪಾರ್ಟಿ‌ ಇಂದು ಗೋವಾ ಚುನಾವಣೆಗೆ ಸಿಎಂ ಅಭ್ಯರ್ಥಿಯನ್ನ ಘೋಷಿಸಿದೆ. ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಆಪ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಅಮಿತ್ ಪಾಲೇಕರ್ ಗೋವಾ ರಾಜ್ಯದ ಸಿಎಂ ಅಭ್ಯರ್ಥಿ ಎಂದು ಅರವಿಂದ್ ಕೇಜ್ರಿವಾಲ್ ಪಣಜಿಯಲ್ಲಿ ತಿಳಿಸಿದ್ದಾರೆ.

ಎಎಪಿ ಈ ಬಾರಿ ಗೋವಾದ ಎಲ್ಲಾ 40 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಭಂಡಾರಿ ಸಮುದಾಯದ ಅಮಿತ್ ಸೆಂಟ್ ಕ್ರಜ಼್ ಕ್ಷೇತ್ರದ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲಿದ್ದಾರೆ.

ಅಮಿತ್ ಪಾಲೇಕರ್ ಅವರು, ಇತ್ತೀಚೆಗಷ್ಟೇ ಹಳೆ ಗೋವಾದ ಯುನೆಸ್ಕೊ ಸಂರಕ್ಷಿತ ನಿವೇಶನದಲ್ಲಿ ನಿರ್ಮಿಸಿರುವ ಶೈನಾ ಎನ್‌ಸಿ ಅಕ್ರಮ ಬಂಗಲೆ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಬಂಡಾರಿ ಸಮುದಾಯದವರನ್ನ (ಒಬಿಸಿ ಸಮುದಾಯ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವುದಾಗಿ ಇತ್ತೀಚೆಗೆ ಆಪ್ ನಾಯಕರು ಭರವಸೆ ನೀಡಿದ್ದರು. ಪಾಲೇಕರ್ ಅವರ ಹೆಸರನ್ನು ಘೋಷಿಸುವ ಮೊದಲು, ಗೋವಾ ರಾಜ್ಯಕ್ಕೆ ಆಪ್ ಪಕ್ಷವು ಪ್ರಾಮಾಣಿಕ ವ್ಯಕ್ತಿಯನ್ನ ಆಯ್ಕೆ ಮಾಡಿದೆ. ಸಮುದಾಯದ ಕಲ್ಯಾಣ ಕಾರ್ಯಗಳಿಗೆ ಹೆಸರು ವಾಸಿಯಾದ ವ್ಯಕ್ತಿ ಅಮಿತ್. ಗೋವಾದ ಜನಸಂಖ್ಯೆಯಲ್ಲಿ ಭಂಡಾರಿ ಸಮುದಾಯವು ಶೇಕಡ 35% ಇದೆ. ಆದರೆ ರವಿನಾಯಕ್ ಬಿಟ್ಟರೆ ಇದುವರೆಗೂ ಯಾರೂ ಸಿಎಂ ಆಗಿಲ್ಲ. ನಾವು ಜಾತಿ ರಾಜಕಾರಣ ಮಾಡುತ್ತಿಲ್ಲ, ಇತರ ಪಕ್ಷಗಳು ಸಮುದಾಯದ ವಿರುದ್ಧ ರಾಜಕೀಯ ಮಾಡಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

9 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago