ಪಣಜಿ: ಗೋವಾದ ಕಾಣಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರಕ್ಕೆ ಸಮರ್ಪಿಸಿದರು.
“ದಕ್ಷಿಣದ ಅಯೋಧ್ಯೆ’ಯಾಗಿ ರೂಪುಗೊಳ್ಳುತ್ತಿರುವ ಪರ್ತಗಾಳಿ ಮಠದ ಬಿಲ್ಲಿನಾಕಾರದ “ಆದರ್ಶ ಧಾಮ್’ ಪ್ರದೇಶದಲ್ಲಿ ಆಕಾರ ಪಡೆದಿರುವ ಮೂರ್ತಿ ಶ್ರೀಮದ್ ವಿದ್ಯಾಧೀಶತೀರ್ಥ ಶ್ರೀಪಾದರ ಜತೆ ಅನಾವರಣಗೊಳಿಸಿದರು.
ಶ್ರೀಮಠಕ್ಕೆ 550 ಸಂವತ್ಸರಗಳು ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ “ಸಾರ್ಧ ಪಂಚ ಶತಮಾನೋತ್ಸವ’ ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…