ಉಡುಪಿ: ಕಾಮದೇನು ಗೋಸೇವಾ ಸಮಿತಿ ಮಂದಾರ್ತಿ ಇವರ ನೇತ್ರತ್ವದಲ್ಲಿ ಅನಾಥ ಗೋವುಗಳ ರಕ್ಷಣೆ ಮಾಡುತ್ತಿರುವ ಗೋಶಾಲೆಗಳಿಗೆ ವಿವಿಧ ಸಂಘಸಂಸ್ಥೆಗಳ ಮೂಲಕ ಮೇವನ್ನು ನೀಡಲು ಆರಂಭಗೊಂಡಿರುವ ಗೋವಿಗಾಗಿ ಮೇವು ಅಭಿಯಾನದ ಅಧಿಕೃತ ಪೇಸ್ಬುಕ್ ಪೇಜ್ ಅನ್ನು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ‘ಗೋವಿಗಾಗಿ ಮೇವು’ ಬಂದರು,ಮೀನುಗಾರಿಕೆ ಹಾಗೂ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು, ಗೋವಿಗಾಗಿ ಮೇವು ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ವ್ಯಾಪಿಸಲಿ ಎಂದರು.
ಗೋವಿಗಾಗಿ ಮೇವು ಅಭಿಯಾನದ ಸಂಚಾಲಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಪ್ರಸ್ಥಾವಿಕ ಮಾತನಾಡಿ, ಫೇಸ್ಬುಕ್ ಮೂಲಕ ರಾಜ್ಯಾದ್ಯಂತ ಸಾರ್ವಜನಿಕರನ್ನ,ಸಂಘಸಂಸ್ಥೆಗಳನ್ಮ ಅಭಿಯಾನಕ್ಕೆ ಪ್ರೇರೇಪಿಸುವುದು ನಮ್ಮಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಪ್ರಮುಖರಾದ ಹರೀಶ್ ಶೆಟ್ಟಿ ಚೇರ್ಕಾಡಿ, ರಾಜು ಕುಲಾಲ್, ಕಮಲಾಕ್ಷ ಹೆಬ್ಬಾರ್, ಅಕ್ಷತ್ ಸೇರೆಗಾರ್, ದಿ!ಪ್ರತೀಕ್ ಶೆಟ್ಟಿ ಗೆಳೆಯರ ಬಳಗ ಹೆಂಗವಳ್ಳಿ ಯ ಸದಸ್ಯರು ,ಪ್ರೆಂಡ್ಸ್ ಬಳ್ಕೂರಿನ ಸದಸ್ಯರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…