Featured

ಗೋವುಗಳನ್ನು ಕೊಲ್ಲುವವರು ಮನುಷ್ಯರೇ ಅಲ್ಲ, ಅವರು ರಾಕ್ಷಸ ವರ್ಗಕ್ಕೆ ಸೇರುತ್ತಾರೆ : ಪೇಜಾವರ ಶ್ರೀ -Vishwanews24

ಉಡುಪಿ,: ಕೇಂದ್ರದಲ್ಲಿ ಮೋದಿ ಸರಕಾರ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಗೋರಕ್ಷಣೆಯ ಕುರಿತಂತೆ ಕೇಂದ್ರ ಸರಕಾರದಿಂದ ಇಡೀ ದೆಶಕ್ಕೆ ಅನ್ವಯವಾಗುವ ರೀತಿಯಲ್ಲಿ ಕಾನೂನು ಜಾರಿಯಾಗಲಿ ಎಂದು ಪೇಜಾವರ ಶ್ರೀ ವಿಶ್ವೇಷತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದ್ದಾರೆ.

ಉಡುಪಿ ಪರ್ಯಾಯ ಶ್ರೀ ಪಲಿಮಾರು ಮಠದ ಯೋಜನೆಯಾದ ಸುವರ್ಣ ಗೋಪುರ ಶಿಖರ ಪ್ರತಿಷ್ಟಾನ ಮತ್ತು ಬ್ರಹ್ಮಕಲಶಾಭೀಷೇಕ ಮಹೋತ್ಸವ, ದೇಶಿಯ ಗೋವಿನ ತಳಿಗಳ ಸಮ್ಮಿಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆರ್ಥಿಕ ದೃಷ್ಟಿಯಿಂದ ಮಾತ್ರವಲ್ಲ, ಧಾರ್ಮಿಕ ದೃಷ್ಟಿಯಿಂದ ಮಾತ್ರವಲ್ಲ, ಮಾನವೀಯ ದೃಷ್ಟಿಯಿಂದಲೂ ಗೋವುಗಳ ರಕ್ಷಣೆ ಅತೀ ಅಗತ್ಯ ಎಂದ ಅವರು ಹಾಲು ಕೊಡುವ ಗೋವನ್ನು ಕಡಿದು ತಿನ್ನುವ ಮನಸ್ಸು ಯಾರಿಗೆ ಬರುತ್ತದೆಯೋ ಅವರು ಮಾನವರೇ ಅಲ್ಲ, ರಾಕ್ಷಸವರ್ಗಕ್ಕೆ ಸೇರಿದವರು. ಗೋಹತ್ಯೆ ಮಾಡಿ ಸೇವಿಸುವುದು ಅತ್ಯಂತ ಹೇಯಕಾರ್ಯ ಎಂದರು.

ಕಾರ್ಯಕ್ರಮದಲ್ಲಿ ಉಡುಪಿಯ ನೀಲಾವರ ಗೋಶಾಲೆ, ಅದಮಾರು ಮಠ ಗೋಶಾಲೆ, ಕೃಷ್ಣ ಮಠದ ಗೋ ಶಾಲೆ, ಸೋದೆ ಮಠ ಗೋ ಶಾಲೆ ಹಾಗೂ ಉಡುಪಿ ಮಂಗಳೂರಿನ ಇತರ ಗೋಶಾಲೆಗಳಲ್ಲಿರು ಭಾರತೀಯ ದೇಸಿ ತಳಿಯ ಗೋವುಗಳನ್ನು ಪ್ರದರ್ಶನಕ್ಕೆ ತರಲಾಗಿತ್ತು.

ಪಲಿಮಾರು ಮಠದ ಪರ್ಯಾಯ ಶ್ರೀ ವಿದ್ಯಾದೀಶತೀರ್ಥರು, ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯ ಯತಿಗಳಾದ, ಶ್ರೀ ಈಶಪ್ರಿಯತೀರ್ಥ ಸ್ವಾಮಿಜಿ ಸೇರಿದಂತೆ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago