Featured

ಗೋವುಗಳನ್ನು ಕೊಲ್ಲುವವರು ಮನುಷ್ಯರೇ ಅಲ್ಲ, ಅವರು ರಾಕ್ಷಸ ವರ್ಗಕ್ಕೆ ಸೇರುತ್ತಾರೆ : ಪೇಜಾವರ ಶ್ರೀ -Vishwanews24

ಉಡುಪಿ,: ಕೇಂದ್ರದಲ್ಲಿ ಮೋದಿ ಸರಕಾರ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಗೋರಕ್ಷಣೆಯ ಕುರಿತಂತೆ ಕೇಂದ್ರ ಸರಕಾರದಿಂದ ಇಡೀ ದೆಶಕ್ಕೆ ಅನ್ವಯವಾಗುವ ರೀತಿಯಲ್ಲಿ ಕಾನೂನು ಜಾರಿಯಾಗಲಿ ಎಂದು ಪೇಜಾವರ ಶ್ರೀ ವಿಶ್ವೇಷತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದ್ದಾರೆ.

ಉಡುಪಿ ಪರ್ಯಾಯ ಶ್ರೀ ಪಲಿಮಾರು ಮಠದ ಯೋಜನೆಯಾದ ಸುವರ್ಣ ಗೋಪುರ ಶಿಖರ ಪ್ರತಿಷ್ಟಾನ ಮತ್ತು ಬ್ರಹ್ಮಕಲಶಾಭೀಷೇಕ ಮಹೋತ್ಸವ, ದೇಶಿಯ ಗೋವಿನ ತಳಿಗಳ ಸಮ್ಮಿಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆರ್ಥಿಕ ದೃಷ್ಟಿಯಿಂದ ಮಾತ್ರವಲ್ಲ, ಧಾರ್ಮಿಕ ದೃಷ್ಟಿಯಿಂದ ಮಾತ್ರವಲ್ಲ, ಮಾನವೀಯ ದೃಷ್ಟಿಯಿಂದಲೂ ಗೋವುಗಳ ರಕ್ಷಣೆ ಅತೀ ಅಗತ್ಯ ಎಂದ ಅವರು ಹಾಲು ಕೊಡುವ ಗೋವನ್ನು ಕಡಿದು ತಿನ್ನುವ ಮನಸ್ಸು ಯಾರಿಗೆ ಬರುತ್ತದೆಯೋ ಅವರು ಮಾನವರೇ ಅಲ್ಲ, ರಾಕ್ಷಸವರ್ಗಕ್ಕೆ ಸೇರಿದವರು. ಗೋಹತ್ಯೆ ಮಾಡಿ ಸೇವಿಸುವುದು ಅತ್ಯಂತ ಹೇಯಕಾರ್ಯ ಎಂದರು.

ಕಾರ್ಯಕ್ರಮದಲ್ಲಿ ಉಡುಪಿಯ ನೀಲಾವರ ಗೋಶಾಲೆ, ಅದಮಾರು ಮಠ ಗೋಶಾಲೆ, ಕೃಷ್ಣ ಮಠದ ಗೋ ಶಾಲೆ, ಸೋದೆ ಮಠ ಗೋ ಶಾಲೆ ಹಾಗೂ ಉಡುಪಿ ಮಂಗಳೂರಿನ ಇತರ ಗೋಶಾಲೆಗಳಲ್ಲಿರು ಭಾರತೀಯ ದೇಸಿ ತಳಿಯ ಗೋವುಗಳನ್ನು ಪ್ರದರ್ಶನಕ್ಕೆ ತರಲಾಗಿತ್ತು.

ಪಲಿಮಾರು ಮಠದ ಪರ್ಯಾಯ ಶ್ರೀ ವಿದ್ಯಾದೀಶತೀರ್ಥರು, ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯ ಯತಿಗಳಾದ, ಶ್ರೀ ಈಶಪ್ರಿಯತೀರ್ಥ ಸ್ವಾಮಿಜಿ ಸೇರಿದಂತೆ ಹಲವಾರು ಮಂದಿ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

21 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

22 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

22 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

23 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

23 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

23 hours ago