ಉಡುಪಿ: ಗೋ ರಕ್ಷಣೆ ಮತ್ತು ಗಂಗಾ ಶುದ್ದೀಕರಣದಿಂದ ಗೋವಿನ ಅನುಗ್ರಹ ಸಿಗುತ್ತದೆ. ಹಿಂದೂ ಧರ್ಮದ ಪವಿತ್ರ ಆರಾಧನೆ ನಡೆಸಲ್ಪಡುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಮಾನ್ಯ ಮಾಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು. ಗೋವಿನ ಸಂರಕ್ಷಣೆ ಜತೆ ಗಂಗಾ ಶುದ್ಧೀಕರಣವಾಗಬೇಕು. ಜಗತ್ತಿಗೆ ಭಾರತ ನೀಡಿದ ಕೊಡುಗೆಗಳಾದ ಯೋಗ ಮತ್ತು ಆಯುರ್ವೇದಗಳನ್ನು ರಾಮದೇವ್ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಭಾರತವು ರೋಗಮುಕ್ತ, ಶೀಲಯುಕ್ತ, ಭ್ರಷ್ಟಾಚಾರತ್ಯಕ್ತ, ರಾಷ್ಟ್ರಭಕ್ತ, ಶಕ್ತರಾಷ್ಟ್ರವಾಗ ಬೇಕು ಎಂದು ಅಧ್ಯಕ್ಷತೆ ವಹಿಸಿದ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಈಗ ಕಾಶ್ಮೀರ ಭಾರತದ ಭೂಪಟದಲ್ಲಿ ಸೇರಿದೆ. ಮುಂದೆ ಪಾಕ್ ಆಕ್ರಮಿತ ಕಾಶ್ಮೀರದ ಭಾಗವೂ ಸೇರುವಂತಾಗಲಿ ಎಂದು ಪರ್ಯಾಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹಾರೈಸಿದರು.
ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗಂಗಾ ನದಿ ದೇಶದ ಪವಿತ್ರ ನದಿಯಾಗಿದ್ದು, ಇದರಲ್ಲಿ ಶುದ್ಧ ನೀರು ಹರಿಯುತ್ತಿತ್ತು. ಆದರೆ, ಇಂದು ಗಂಗಾ ನದಿ ಸಂಪೂರ್ಣ ಕಲುಷಿತಗೊಂಡಿದೆ. ಗಂಗಾಜಲ ಶುದ್ದೀಕರಣ ನಮ್ಮ ದೇಶದ ದುರಂತವಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಗಂಗಾ ನದಿ ಶುದ್ಧಗೊಳ್ಳಬೇಕಾದರೆ ಮೊದಲಿಗೆ ಕಾರ್ಖಾನೆಗಳಿಂದ ಬರುವ ತ್ಯಾಜ್ಯ ನೀರನ್ನು ನಿಲ್ಲಿಸಬೇಕೆಂದರು.
ಇನ್ನು ಯೋಗ ಮತ್ತು ಆಯುರ್ವೇದ ಭಾರತ ದೇಶದ ಕೊಡುಗೆಯಾಗಿದೆ. ಈ ಎರಡು ಪದ್ಧತಿಗಳು ಪುರಾತನ ಕಾಲದಿಂದಲೂ ಜಾರಿಯಲ್ಲಿತ್ತು. ಇದು ಜಾತ್ಯಾತೀತವಾದುದು. ಹಿಂದು ಸಂಸ್ಕೃತಿಯ ರಕ್ಷಣೆಗಾಗಿ ಸಂತರು ಹಾಗೂ ಸಮಾಜ ಭಾಂದವರು ಸಾರಥಿಗಳಾಗಬೇಕು ಎಂದು ಪೇಜಾವರ ಸ್ವಾಮೀಜಿ ಕರೆ ನೀಡಿದ್ದಾರೆ.
ನಮ್ಮ ರಾಷ್ಟ್ರ ರೋಗ ಮುಕ್ತ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಆಗಬೇಕೆಂಬ ಆಶಯವನ್ನು ಅವರು ವ್ಯಕ್ತ ಪಡಿಸಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…