ಉಡುಪಿ: ಗೋ ರಕ್ಷಣೆ ಮತ್ತು ಗಂಗಾ ಶುದ್ದೀಕರಣದಿಂದ ಗೋವಿನ ಅನುಗ್ರಹ ಸಿಗುತ್ತದೆ. ಹಿಂದೂ ಧರ್ಮದ ಪವಿತ್ರ ಆರಾಧನೆ ನಡೆಸಲ್ಪಡುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಮಾನ್ಯ ಮಾಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು. ಗೋವಿನ ಸಂರಕ್ಷಣೆ ಜತೆ ಗಂಗಾ ಶುದ್ಧೀಕರಣವಾಗಬೇಕು. ಜಗತ್ತಿಗೆ ಭಾರತ ನೀಡಿದ ಕೊಡುಗೆಗಳಾದ ಯೋಗ ಮತ್ತು ಆಯುರ್ವೇದಗಳನ್ನು ರಾಮದೇವ್ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಭಾರತವು ರೋಗಮುಕ್ತ, ಶೀಲಯುಕ್ತ, ಭ್ರಷ್ಟಾಚಾರತ್ಯಕ್ತ, ರಾಷ್ಟ್ರಭಕ್ತ, ಶಕ್ತರಾಷ್ಟ್ರವಾಗ ಬೇಕು ಎಂದು ಅಧ್ಯಕ್ಷತೆ ವಹಿಸಿದ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಈಗ ಕಾಶ್ಮೀರ ಭಾರತದ ಭೂಪಟದಲ್ಲಿ ಸೇರಿದೆ. ಮುಂದೆ ಪಾಕ್ ಆಕ್ರಮಿತ ಕಾಶ್ಮೀರದ ಭಾಗವೂ ಸೇರುವಂತಾಗಲಿ ಎಂದು ಪರ್ಯಾಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹಾರೈಸಿದರು.
ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗಂಗಾ ನದಿ ದೇಶದ ಪವಿತ್ರ ನದಿಯಾಗಿದ್ದು, ಇದರಲ್ಲಿ ಶುದ್ಧ ನೀರು ಹರಿಯುತ್ತಿತ್ತು. ಆದರೆ, ಇಂದು ಗಂಗಾ ನದಿ ಸಂಪೂರ್ಣ ಕಲುಷಿತಗೊಂಡಿದೆ. ಗಂಗಾಜಲ ಶುದ್ದೀಕರಣ ನಮ್ಮ ದೇಶದ ದುರಂತವಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಗಂಗಾ ನದಿ ಶುದ್ಧಗೊಳ್ಳಬೇಕಾದರೆ ಮೊದಲಿಗೆ ಕಾರ್ಖಾನೆಗಳಿಂದ ಬರುವ ತ್ಯಾಜ್ಯ ನೀರನ್ನು ನಿಲ್ಲಿಸಬೇಕೆಂದರು.
ಇನ್ನು ಯೋಗ ಮತ್ತು ಆಯುರ್ವೇದ ಭಾರತ ದೇಶದ ಕೊಡುಗೆಯಾಗಿದೆ. ಈ ಎರಡು ಪದ್ಧತಿಗಳು ಪುರಾತನ ಕಾಲದಿಂದಲೂ ಜಾರಿಯಲ್ಲಿತ್ತು. ಇದು ಜಾತ್ಯಾತೀತವಾದುದು. ಹಿಂದು ಸಂಸ್ಕೃತಿಯ ರಕ್ಷಣೆಗಾಗಿ ಸಂತರು ಹಾಗೂ ಸಮಾಜ ಭಾಂದವರು ಸಾರಥಿಗಳಾಗಬೇಕು ಎಂದು ಪೇಜಾವರ ಸ್ವಾಮೀಜಿ ಕರೆ ನೀಡಿದ್ದಾರೆ.
ನಮ್ಮ ರಾಷ್ಟ್ರ ರೋಗ ಮುಕ್ತ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಆಗಬೇಕೆಂಬ ಆಶಯವನ್ನು ಅವರು ವ್ಯಕ್ತ ಪಡಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…