ವಿಜಯಪುರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವಂತೆ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ನಿಯಂತ್ರಣ ಮಾಡುವ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ವಿಜಯಪುರ ನಗರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ ರಾಜ್ಯ ಪ್ರಕೋಷ್ಠಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಅಯೋಧ್ಯೆ ಶ್ರೀ ರಾಮನ ಜನ್ಮ ಸ್ಥಳ ಎಂದು ಬಿಜೆಪಿಯಾಗಲಿ, ಆರ್ ಎಸ್ ಎಸ್ ಆಗಲಿ, ಯಾವುದೇ ಸ್ವಾಮೀಜಿಗಳು ಹೇಳಿದ್ದಲ್ಲ, ಈ ದೇಶದ ಸುಪ್ರೀಂ ಕೋರ್ಟ್ ನೀಡಿದ ತೀರ್ಪಾಗಿದೆ. ಆದರೆ, ಅಯೋಧ್ಯೆಯ ವಿವಾದಿತ ಪ್ರದೇಶ ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ ಗೆ ಅವಮಾನ ಮಾಡಿದ್ದಾರೆ ಎಂದು ಹೇಳಿದರು.
ಇದುವರೆಗೆ ಕಾಂಗ್ರೆಸ್ ಗೆ ಸ್ವಾತಂತ್ರ್ಯ ಸಂಗ್ರಾಮದ ಪುಣ್ಯ ಇತ್ತು, ಮಹಾತ್ಮ ಗಾಂಧಿಯವರ ಪುಣ್ಯ ಇತ್ತು. ಆದರೆ, ಈಗ ಕಾಂಗ್ರೆಸ್ ಅಕೌಂಟ್ ಖಾಲಿಯಾಗಿದೆ ಎಂದರು.ರಾಜ್ಯದಲ್ಲಿ ಈ ಹಿಂದೆ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಯುತ್ತಿತ್ತು. ಆದರೆ, ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಿದೆ ಎಂದರು.
ದೇಶದಲ್ಲಿ ಗಲಭೆ ಸೃಷ್ಟಿಸಲು, ಮೋದಿ ಹೆಸರು ಕೆಡಿಸಲು, ಕಳಂಕ ತರಲು ಷಡ್ಯಂತ್ರ ನಡೆದಿದೆ. ಆದರೆ, ಇಂತಹ ಷಡ್ಯಂತ್ರಗಳಿಗೆ, ಹೋರಾಟಗಳಿಗೆ ಮೋದಿ ಹೆದರುವುದಿಲ್ಲ ಎಂದರು.
ಟೂಲ್ಕಿಟ್ ಪ್ರಕರಣ : ನಿಕಿತಾಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24
ಬಿಜೆಪಿ ದೇಶದಲ್ಲಿ ಕೇವಲ ಮತ ಪರಿವರ್ತನೆಯ ರಾಜಕಾರಣ ಮಾಡುತ್ತಿಲ್ಲ, ರಾಷ್ಟ್ರ ಪರಿವರ್ತನೆಯ ರಾಜಕಾರಣ ಮಾಡುತ್ತಿದೆ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ, ತುರ್ತು ಪರಿಸ್ಥಿತಿ ಹೇರುವ ಮೂಲಕ ರಾಷ್ಟ್ರ ಭಕ್ತರನ್ನು ಜೈಲಿಗೆ ಹಾಕಿದೆ, ಭ್ರಷ್ಟಾಚಾರ ಮಾಡಿದೆ, ಭಯೋತ್ಪಾದಕರಿಗೆ ಬಿರಿಯಾನಿ ಕೊಟ್ಟಿದೆ, ಸಿಖ್ಖರ ಕಗ್ಗೊಲೆ ಮಾಡಿದೆ, ಕುಟುಂಬ ರಾಜಕಾರಣ ಮಾಡಿದೆ. ಅಧಿಕಾರ ಇಲ್ಲದಿರುವಾಗ ಕಾಂಗ್ರೆಸ್ ಗಲಭೆ ಮಾಡುತ್ತದೆ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…