ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿರುವ ಗೋಹತ್ಯೆ ನಿಷೇಧ ಕಾನೂನನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುವ ಮೂಲಕ ಬಿಜೆಪಿ ಸರ್ಕಾರ ತನ್ನ ಮಾತನ್ನು ಉಳಿಸಿಕೊಂಡಿದೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಸಾಯಿಖಾನೆಗಳನ್ನ ಹದ್ದುಬಸ್ತಿನಲ್ಲಿಡಲು ಕಾನೂನಿನಲ್ಲಿ ಒಂದು ಅಂಶ ಇಡಬೇಕಿತ್ತು. ಹಾಗೆಯೇ, ಗೋಹತ್ಯೆ ಮಾಡುವವರಿಗೆ ಜೈಲು ಶಿಕ್ಷೆಯನ್ನು ಏಳು ವರ್ಷದ ಬದಲು 10 ವರ್ಷಕ್ಕೆ ಹೆಚ್ಚಿಸಬೇಕಿತ್ತು. ಈ ಮೊದಲೇ ಇರುವ ಕಾನೂನಿನಲ್ಲಿ 3 ವರ್ಷದವರೆಗೆ ಜೈಲುಶಿಕ್ಷೆಗೆ ಅವಕಾಶ ಇದೆ. ಇದನ್ನ ಈಗ 7 ವರ್ಷಕ್ಕೆ ಹೆಚ್ಚಿಸಲಾಗಿದೆ. ಆದರೂ ಆರೋಪಿಗಳು ಜಾಮೀನು ತೆಗೆದುಕೊಳ್ಳಲು ಸಾಧ್ಯವಿದೆ. ಶಿಕ್ಷೆಯ ಅವಕಾಶವನ್ನ 10 ವರ್ಷಕ್ಕೆ ಏರಿಸಿದರೆ ಆರೋಪಿಗಳು ಜಾಮೀನು ಪಡೆಯಲು ಕಷ್ಟಸಾಧ್ಯವಾಗುತ್ತದೆ. ಹೀಗಾಗಿ ಶಿಕ್ಷೆ ಪ್ರಮಾಣದ ಅವಕಾಶವನ್ನು ಹೆಚ್ಚಿಸಬೇಕಿತ್ತು ಎಂದು ಪ್ರಮೋದ್ ಮುತಾಲಿಕ್ ಸಲಹೆ ನೀಡಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…