ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿರುವ ಗೋಹತ್ಯೆ ನಿಷೇಧ ಕಾನೂನನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುವ ಮೂಲಕ ಬಿಜೆಪಿ ಸರ್ಕಾರ ತನ್ನ ಮಾತನ್ನು ಉಳಿಸಿಕೊಂಡಿದೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಸಾಯಿಖಾನೆಗಳನ್ನ ಹದ್ದುಬಸ್ತಿನಲ್ಲಿಡಲು ಕಾನೂನಿನಲ್ಲಿ ಒಂದು ಅಂಶ ಇಡಬೇಕಿತ್ತು. ಹಾಗೆಯೇ, ಗೋಹತ್ಯೆ ಮಾಡುವವರಿಗೆ ಜೈಲು ಶಿಕ್ಷೆಯನ್ನು ಏಳು ವರ್ಷದ ಬದಲು 10 ವರ್ಷಕ್ಕೆ ಹೆಚ್ಚಿಸಬೇಕಿತ್ತು. ಈ ಮೊದಲೇ ಇರುವ ಕಾನೂನಿನಲ್ಲಿ 3 ವರ್ಷದವರೆಗೆ ಜೈಲುಶಿಕ್ಷೆಗೆ ಅವಕಾಶ ಇದೆ. ಇದನ್ನ ಈಗ 7 ವರ್ಷಕ್ಕೆ ಹೆಚ್ಚಿಸಲಾಗಿದೆ. ಆದರೂ ಆರೋಪಿಗಳು ಜಾಮೀನು ತೆಗೆದುಕೊಳ್ಳಲು ಸಾಧ್ಯವಿದೆ. ಶಿಕ್ಷೆಯ ಅವಕಾಶವನ್ನ 10 ವರ್ಷಕ್ಕೆ ಏರಿಸಿದರೆ ಆರೋಪಿಗಳು ಜಾಮೀನು ಪಡೆಯಲು ಕಷ್ಟಸಾಧ್ಯವಾಗುತ್ತದೆ. ಹೀಗಾಗಿ ಶಿಕ್ಷೆ ಪ್ರಮಾಣದ ಅವಕಾಶವನ್ನು ಹೆಚ್ಚಿಸಬೇಕಿತ್ತು ಎಂದು ಪ್ರಮೋದ್ ಮುತಾಲಿಕ್ ಸಲಹೆ ನೀಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…