Featured

ಗೋಹತ್ಯೆ ನಿಷೇಧ ಮಸೂದೆಯಿಂದ ಅದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿಗೆ ಬೀಳಲಿವೆ : ಸರಕಾರದ ಕಾಯ್ದೆಯ ವಿರುದ್ಧ ಸಿದ್ದರಾಮಯ್ಯ – Vishwanews24

ಗೋಹತ್ಯೆ ನಿಷೇಧ ಮಸೂದೆಯಿಂದ ಅದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿಗೆ ಬೀಳಲಿವೆ : ಸರಕಾರದ ಕಾಯ್ದೆಯ ವಿರುದ್ಧ ಸಿದ್ದರಾಮಯ್ಯ – Vishwanews24

ಬೆಂಗಳೂರು : ರಾಜ್ಯ ಸರಕಾರ ತಂದಿರುವ ಗೋಹತ್ಯೆ ನಿಷೇಧ ಮಸೂದೆಯಿಂದ ಅದನ್ನೇ ನಂಬಿಕೊಂಡಿರುವ ಕುಟುಂಬಗಳು ಬೀದಿಗೆ ಬಿಳಲಿವೆ ಅಲ್ಲದೆ ಚರ್ಮೋದ್ಯಮದಲ್ಲಿ ಇರುವಂತಹ ಜನರು ತಮ್ಮ ಕೆಲಸಗಳನ್ನು ಕಳೆದುಕೊಂಡು ನಿರುದ್ಯೋಗಿಗಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಕಾಯ್ದೆಯ ವಿರುದ್ಧ ಕಿಡಿಕಾರಿದ್ದಾರೆ.

ಗೋಹತ್ಯೆ ನಿಷೇಧ ಕುರಿತು ಮಾತನಾಡಿದ ಅವರು ಈಗಾಗಲೇ ಗೋಹತ್ಯೆ ‌ನಿಷೇಧ ವಿಧೇಯಕ್ಕೆ ಈಗಾಗಲೇ ಹಲವು ತಿದ್ದುಪಡಿ ತಂದಿದ್ದಾರೆ. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಈಗಾಗಲೇ ಕಾನೂನುಗಳಿವೆಯಾವ ಪ್ರಾಣಿಗಳನ್ನು ವಧೆ ಮಾಡಬಹುದು ಅಂತ 1964 ರ ಗೋಹತ್ಯೆ ‌ನಿಷೇಧ ವಿಧೇಯಕದಲ್ಲಿ ಹೇಳಿದ್ದಾರೆ ಎಂದರು.

ರಾಜ್ಯದಲ್ಲಿ ಗೋಶಾಲೆಗಳಿವೆ, ಇಷ್ಟು ದೊಡ್ಡ ಸಂಖ್ಯೆಯ ರಾಸುಗಳಿಗೆ ವಯಸ್ಸಾದರೆ, ರೋಗ ಬಂದರೆ, ಗಂಡು ಕರು ಹುಟ್ಟಿದರೆ ಏನು ಮಾಡಬೇಕು..?ಈ ಹಸುಗಳನ್ನು ಸಾಕಲು ಸರ್ಕಾರ ರೈತರಿಗೆ ಏನು ಕೊಡುತ್ತದೆ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಎಂಟು ಲಕ್ಷ ಪರಿಶಿಷ್ಟ ಜಾತಿಯ ಜನ ಪ್ರಾಣಿಗಳ ಚರ್ಮ ಸುಲಿಯುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಅಲ್ಲದೆ ಅದರಿಂದಲೇ ಬದುಕುತ್ತಿದ್ದಾರೆ ಇನ್ನು ಮುಂದೆ ಅವರ ಬದುಕಿನ ದಾರಿ ಹೇಗೆ ಎಂದರು.

ಮೋದಿ ಸರ್ಕಾರ ಬಂದ ಮೇಲೆ ಮಾಂಸದ ರಫ್ತು ಹೆಚ್ಚಾಗಿದೆ ಎಂದಿದ್ದಾರೆ ಆದರೆ ನೀವು ಅದನ್ನು ನಿಯಂತ್ರಣ ಮಾಡಿದ್ದೀರಾ..?
ದೇಶದಲ್ಲಿ ಹೆಚ್ಚಿನ ಜನ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ, ಅಲ್ಲದೆ ನಮ್ಮ ದೇಶ ಚರ್ಮೋದ್ಯಮದಲ್ಲಿ ಎರಡನೇ ಸ್ಥಾನದಲ್ಲಿದೆ, ಆ ಇಂಡಸ್ಟ್ರಿ ಮೇಲೆ ಬಹಳಷ್ಟು ಜನ ಅವಲಂಬಿತರಾಗಿದ್ದಾರೆ, ಈಗ ಈ ಉದ್ಯಮ ನಿಂತು ಹೋದರೆ ಚರ್ಮದ ಉದ್ಯಮದಿಂದ 5.5 ಬಿಲಿಯನ್ ಡಾಲರ್ ಆದಾಯ ದೇಶಕ್ಕೆ ನಷ್ಟವಾಗಲಿದೆ ಎಂದು ಗುಡುಗಿದರು.

ನಿರುದ್ಯೋಗ ದೇಶದಲ್ಲಿ ಹೆಚ್ಚಾಗುತ್ತೆಇಡೀ ದೇಶಕ್ಕೇ ಅನ್ವಯವಾಗುವಂತಹ ಒಂದು ಪಾಲಿಸಿ ತಯಾರು ಮಾಡಿ, ಅದಕ್ಕಾಗಿ ಕೇಂದ್ರದ ಸರ್ಕಾರವೇ ಒಂದು ತಜ್ಞರ ಸಮಿತಿ ರಚಿಸಲಿ ಆ ವರದಿಯನ್ನು ಜನರ ಮುಂದಿಡಲಿ ಜೊತೆಗೆ ಆ ವಿಷಯದ ಬಗ್ಗೆ ಚರ್ಚೆ ಆಗಲೀ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು. ಅನುತ್ಪಾದಕ ಹಸುಗಳನ್ನು ಸರ್ಕಾರವೇ ಕೊಂಡುಕೊಳ್ಳಲಿ ರೈತರ ಮೇಲೆ ಯಾಕೆ ಹೊರೆ ಹಾಕುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

6 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

9 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

9 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

11 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

12 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

15 hours ago