Featured

ಗೋಹತ್ಯೆ ನಿಷೇಧ ಮಸೂದೆ : ಬಿಜೆಪಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ :ಎಚ್.ಡಿ.ದೇವೇಗೌಡ -Vishwanews24

ಗೋಹತ್ಯೆ ನಿಷೇಧ ಮಸೂದೆ :ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ ..

ಗೋಹತ್ಯೆ ನಿಷೇಧ ಮಸೂದೆ : ಬಿಜೆಪಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ :ಎಚ್.ಡಿ.ದೇವೇಗೌಡ -Vishwanews24

ಬೆಂಗಳೂರು: ಬಿಜೆಪಿ ಸರ್ಕಾರ ಗೋಹತ್ಯೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, “ರಾಜ್ಯ ಸರ್ಕಾರದ ಜಾರಿಗೊಳಿಸಿರುವ ಗೋಹತ್ಯೆ ನಿಷೇಧಕ ವಿಧೇಯಕವನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ಕೂಡ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ” ಎಂದರು.

ಸದ್ಯ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ-1964 ಜಾರಿಯಲ್ಲಿದೆ. 2010ರಲ್ಲೂ ಕಾಯ್ದೆಯಲ್ಲಿ‌ ಬದಲಾವಣೆ ಮಾಡಲು ಆಗಿನ ಬಿಜೆಪಿ ಸರಕಾರ ಯತ್ನಿಸಿತ್ತು. ಆಗ ಪ್ರತಿಪಕ್ಷವಾಗಿದ್ದ ‌ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜತೆಯಾಗಿ ವಿರೋಧಿಸಿದ್ದವು. ತಾನು ರಾಜ್ಯಪಾಲರು ಮತ್ತು ರಾಷ್ಟ್ರಪತಿಯನ್ನು ಭೇಟಿಯಾಗಿ ಮಸೂದೆಗೆ ಒಪ್ಪಿಗೆ ನೀಡದಂತೆ‌ ಒತ್ತಾಯಿಸಿದ್ದೆ. ಬಳಿಕ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಆ ಬಳಿಕ ಸರಕಾರದ ನೇತೃತ್ವ ಬದಲಾಗಿದ್ದರಿಂದ ಈ ಮಸೂದೆಯನ್ನು ಹಿಂಪಡೆಯಲಾಯಿತು. ಹಳೆಯ ಕಾಯ್ದೆಯೇ ಜಾರಿಯಲ್ಲಿ ಉಳಿದಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago