Featured

ಗೋಹತ್ಯೆ ನಿಷೇಧ ಮಸೂದೆ : ಬಿಜೆಪಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ :ಎಚ್.ಡಿ.ದೇವೇಗೌಡ -Vishwanews24

ಗೋಹತ್ಯೆ ನಿಷೇಧ ಮಸೂದೆ :ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ ..

ಗೋಹತ್ಯೆ ನಿಷೇಧ ಮಸೂದೆ : ಬಿಜೆಪಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ :ಎಚ್.ಡಿ.ದೇವೇಗೌಡ -Vishwanews24

ಬೆಂಗಳೂರು: ಬಿಜೆಪಿ ಸರ್ಕಾರ ಗೋಹತ್ಯೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, “ರಾಜ್ಯ ಸರ್ಕಾರದ ಜಾರಿಗೊಳಿಸಿರುವ ಗೋಹತ್ಯೆ ನಿಷೇಧಕ ವಿಧೇಯಕವನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ಕೂಡ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ” ಎಂದರು.

ಸದ್ಯ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ-1964 ಜಾರಿಯಲ್ಲಿದೆ. 2010ರಲ್ಲೂ ಕಾಯ್ದೆಯಲ್ಲಿ‌ ಬದಲಾವಣೆ ಮಾಡಲು ಆಗಿನ ಬಿಜೆಪಿ ಸರಕಾರ ಯತ್ನಿಸಿತ್ತು. ಆಗ ಪ್ರತಿಪಕ್ಷವಾಗಿದ್ದ ‌ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜತೆಯಾಗಿ ವಿರೋಧಿಸಿದ್ದವು. ತಾನು ರಾಜ್ಯಪಾಲರು ಮತ್ತು ರಾಷ್ಟ್ರಪತಿಯನ್ನು ಭೇಟಿಯಾಗಿ ಮಸೂದೆಗೆ ಒಪ್ಪಿಗೆ ನೀಡದಂತೆ‌ ಒತ್ತಾಯಿಸಿದ್ದೆ. ಬಳಿಕ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಆ ಬಳಿಕ ಸರಕಾರದ ನೇತೃತ್ವ ಬದಲಾಗಿದ್ದರಿಂದ ಈ ಮಸೂದೆಯನ್ನು ಹಿಂಪಡೆಯಲಾಯಿತು. ಹಳೆಯ ಕಾಯ್ದೆಯೇ ಜಾರಿಯಲ್ಲಿ ಉಳಿದಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago