Featured

ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ ಆರ್‌‌ಎಸ್‌‌ಎಸ್‌‌ನ ಹುನ್ನಾರ, ‌ಗೋ ಹತ್ಯೆ ತಡೆಯುವುದಾದರೆ ಗೋ ಮಾಂಸ ರಫ್ತಿಗೂ ನಿಷೇಧ ಹೇರಬೇಕಲ್ಲವೆ? : ದಿನೇಶ್‌ ಗುಂಡೂರಾವ್ -Vishwanews24

ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ ಆರ್‌‌ಎಸ್‌‌ಎಸ್‌‌ನ ಹುನ್ನಾರ, ‌ಗೋ ಹತ್ಯೆ ತಡೆಯುವುದಾದರೆ ಗೋ ಮಾಂಸ ರಫ್ತಿಗೂ ನಿಷೇಧ ಹೇರಬೇಕಲ್ಲವೆ? : ದಿನೇಶ್‌ ಗುಂಡೂರಾವ್ -Vishwanews24

ಬೆಂಗಳೂರು, : “ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ ಆರ್‌‌ಎಸ್‌‌ಎಸ್‌‌ನ ಹುನ್ನಾರ. ಯಾಂತ್ರೀಕೃತ ಕೃಷಿ ಅನಿವಾರ್ಯವಾಗಿರುವ ಕಾಲದಲ್ಲಿ ಪಶು ಸಂಗೋಪನೆ ರೈತರ ಪಾಲಿನ ಹೊರೆ” ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ ಆರ್‌‌ಎಸ್‌‌ಎಸ್‌‌ನ ಹುನ್ನಾರ. ಯಾಂತ್ರೀಕೃತ ಕೃಷಿ ಅನಿವಾರ್ಯವಾಗಿರುವ ಕಾಲದಲ್ಲಿ ಪಶು ಸಂಗೋಪನೆ ರೈತರ ಪಾಲಿನ ಹೊರೆ. ಇಂದು ದೇಶದಲ್ಲಿ ನಾಟಿ ದನಗಳನ್ನು ಸಾಕುವ ರೈತರೆಷ್ಟಿದ್ದಾರೆ?. ಹೊಸ ಕಾಯ್ದೆ ಪ್ರಕಾರ ಹಾಲಿಗಾಗಿ, ಉಳುಮೆಗಾಗಿ ಗೋಸಾಗಾಣಿಕೆ ಮಾಡಬೇಕೆಂದರೂ ಅನುಮತಿ ಬೇಕು. ಹೀಗಿರುವಾಗ ರೈತ ಗೋವು ಸಾಕುವುದ್ದೇಗೆ?” ಎಂದು ಪ್ರಶ್ನಿಸಿದ್ದಾರೆ.

“ಗೋ ಹತ್ಯೆ ನಿಷೇಧ ಕಾನೂನಿನಿಂದ ಬಿಡಾಡಿ ದನಗಳ ಸಂಖ್ಯೆ ಜಾಸ್ತಿಯಾಗಲಿವೆ. ಉ.ಪ್ರ.ದಲ್ಲಿ ರೈತರು ಹಸು ಸಾಕುವುದನ್ನು ನಿಲ್ಲಿಸಿದರಿಂದ 6 ವರ್ಷದಲ್ಲಿ 10 ಲಕ್ಷ ಗೋವುಗಳ ಸಂಖ್ಯೆ ಕಡಿಮೆಯಾಗಿದೆ. ವಿಪರ್ಯಾಸವೆಂದರೆ ಇದೇ ಅವಧಿಯಲ್ಲಿ 25ಸಾವಿರ ಕೋಟಿ ಗೋ ಮಾಂಸ ರಫ್ತಾಗಿದೆ. ಗೋ ಹತ್ಯೆ ತಡೆಯುವುದಾದರೆ ಗೋ ಮಾಂಸ ರಫ್ತಿಗೂ ನಿಷೇಧ ಹೇರಬೇಕಲ್ಲವೆ?” ಎಂದು ಕೇಳಿದ್ದಾರೆ.

“ಬಿಜೆಪಿ ಸರ್ಕಾರ ರೈತರಿಗೆ ಮಾರಕ ಕಾಯ್ದೆಗಳ ಮೂಲಕ ಹಂತ ಹಂತವಾಗಿ ವಿಶಪ್ರಾಸನ ಮಾಡುತ್ತಿದೆ. ಗೋಹತ್ಯೆ ನಿಷೇಧ ಕಾನೂನು ಕೂಡ ರೈತರ ಕತ್ತು ಹಿಸುಕುವುದು ಖಚಿತ. ನಾಟಿ ದನಗಳಂತೆ ಮುರ್ರಾ, ಜೆರ್ಸಿ ಹಾಗೂ ಮಿಶ್ರತಳಿಯ ದನಗಳಿಗೆ ರೋಗ ನಿರೋಧಕ ಶಕ್ತಿಯಿಲ್ಲ. 13 ವರ್ಷದೊಳಗಿನ ರೋಗಗ್ರಸ್ತ ದನಗಳನ್ನು ಬಿಜೆಪಿ ನಾಯಕರ ಮನೆ ಮುಂದೆ ಕಟ್ಟಿ ಹಾಕಿ ಬರಬೇಕೆ?” ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 day ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 day ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 day ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

1 day ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

1 day ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago