ಬೆಂಗಳೂರು, : “ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ ಆರ್ಎಸ್ಎಸ್ನ ಹುನ್ನಾರ. ಯಾಂತ್ರೀಕೃತ ಕೃಷಿ ಅನಿವಾರ್ಯವಾಗಿರುವ ಕಾಲದಲ್ಲಿ ಪಶು ಸಂಗೋಪನೆ ರೈತರ ಪಾಲಿನ ಹೊರೆ” ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಗೋಹತ್ಯೆ ನಿಷೇಧ ರೈತರನ್ನು ಬಲಿಪಶು ಮಾಡುವ ಆರ್ಎಸ್ಎಸ್ನ ಹುನ್ನಾರ. ಯಾಂತ್ರೀಕೃತ ಕೃಷಿ ಅನಿವಾರ್ಯವಾಗಿರುವ ಕಾಲದಲ್ಲಿ ಪಶು ಸಂಗೋಪನೆ ರೈತರ ಪಾಲಿನ ಹೊರೆ. ಇಂದು ದೇಶದಲ್ಲಿ ನಾಟಿ ದನಗಳನ್ನು ಸಾಕುವ ರೈತರೆಷ್ಟಿದ್ದಾರೆ?. ಹೊಸ ಕಾಯ್ದೆ ಪ್ರಕಾರ ಹಾಲಿಗಾಗಿ, ಉಳುಮೆಗಾಗಿ ಗೋಸಾಗಾಣಿಕೆ ಮಾಡಬೇಕೆಂದರೂ ಅನುಮತಿ ಬೇಕು. ಹೀಗಿರುವಾಗ ರೈತ ಗೋವು ಸಾಕುವುದ್ದೇಗೆ?” ಎಂದು ಪ್ರಶ್ನಿಸಿದ್ದಾರೆ.
“ಗೋ ಹತ್ಯೆ ನಿಷೇಧ ಕಾನೂನಿನಿಂದ ಬಿಡಾಡಿ ದನಗಳ ಸಂಖ್ಯೆ ಜಾಸ್ತಿಯಾಗಲಿವೆ. ಉ.ಪ್ರ.ದಲ್ಲಿ ರೈತರು ಹಸು ಸಾಕುವುದನ್ನು ನಿಲ್ಲಿಸಿದರಿಂದ 6 ವರ್ಷದಲ್ಲಿ 10 ಲಕ್ಷ ಗೋವುಗಳ ಸಂಖ್ಯೆ ಕಡಿಮೆಯಾಗಿದೆ. ವಿಪರ್ಯಾಸವೆಂದರೆ ಇದೇ ಅವಧಿಯಲ್ಲಿ 25ಸಾವಿರ ಕೋಟಿ ಗೋ ಮಾಂಸ ರಫ್ತಾಗಿದೆ. ಗೋ ಹತ್ಯೆ ತಡೆಯುವುದಾದರೆ ಗೋ ಮಾಂಸ ರಫ್ತಿಗೂ ನಿಷೇಧ ಹೇರಬೇಕಲ್ಲವೆ?” ಎಂದು ಕೇಳಿದ್ದಾರೆ.
“ಬಿಜೆಪಿ ಸರ್ಕಾರ ರೈತರಿಗೆ ಮಾರಕ ಕಾಯ್ದೆಗಳ ಮೂಲಕ ಹಂತ ಹಂತವಾಗಿ ವಿಶಪ್ರಾಸನ ಮಾಡುತ್ತಿದೆ. ಗೋಹತ್ಯೆ ನಿಷೇಧ ಕಾನೂನು ಕೂಡ ರೈತರ ಕತ್ತು ಹಿಸುಕುವುದು ಖಚಿತ. ನಾಟಿ ದನಗಳಂತೆ ಮುರ್ರಾ, ಜೆರ್ಸಿ ಹಾಗೂ ಮಿಶ್ರತಳಿಯ ದನಗಳಿಗೆ ರೋಗ ನಿರೋಧಕ ಶಕ್ತಿಯಿಲ್ಲ. 13 ವರ್ಷದೊಳಗಿನ ರೋಗಗ್ರಸ್ತ ದನಗಳನ್ನು ಬಿಜೆಪಿ ನಾಯಕರ ಮನೆ ಮುಂದೆ ಕಟ್ಟಿ ಹಾಕಿ ಬರಬೇಕೆ?” ಎಂದು ಪ್ರಶ್ನಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…