ಮೈಸೂರು: ಗೋಹತ್ಯೆ ಸಂಪೂರ್ಣ ನಿಷೇಧ, ರಾಮ ಮಂದಿರ ನಿರ್ಮಾಣ ಮತ್ತು ಗಂಗಾ ನದಿ ಸ್ವಚ್ಛತಾ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವಂತೆ ಒತ್ತಾಯಿಸಿ ಅರ್ಚಕರ ನಿಯೋಗದೊಂದಿಗೆ ಶೀಘ್ರದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವುದಾಗಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು ಮತ್ತು ದೇಶದ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಪ್ರಧಾನಿಯವರ ಮೇಲೆ ಒತ್ತಾಯ ಹೇರಲಿದ್ದೇವೆ. ಧಾರ್ಮಿಕ ವಿಷಯಗಳನ್ನು ಹೊರತುಪಡಿಸಿ ಇಂದು ದೇಶ ಬೇರೆ ಹಲವು ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕಿದೆ ಎಂದರು.
ಜೈನರು, ಬುದ್ಧರು ಅಥವಾ ಸಿಖ್ಖರಾಗಿರಲಿ ಎಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರು. ಯಾಕೆಂದರೆ ಭರತ ಖಂಡದ ಹಿಂದಿನ ಸನ್ಯಾಸಿಗಳು, ಋಷಿಗಳು ಹಿಂದೂ ಧರ್ಮದಿಂದಲೇ ಬಂದವರಾಗಿದ್ದಾರೆ. ನಂತರ ದೇಶದಲ್ಲಿ ಬ್ರಿಟಿಷರ ಆಳ್ವಿಕೆ ನಂತರ ಹಿಂದೂ ಧರ್ಮ ಒಡೆದು ಹೋಯಿತು ಎಂದು ಪೇಜಾವರ ಶ್ರೀಗಳು ಪ್ರತಿಪಾದಿಸಿದರು.
ಮೈಸೂರಿನ ಶ್ರೀ ಕೃಷ್ಣಧಾಮದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಅವರು, ಆಗಸ್ಟ್ 14ರಂದು ವೃತ ಮುಗಿದ ನಂತರ ಪ್ರಧಾನಿಯವರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…