ಮೈಸೂರು: ಗೋಹತ್ಯೆ ಸಂಪೂರ್ಣ ನಿಷೇಧ, ರಾಮ ಮಂದಿರ ನಿರ್ಮಾಣ ಮತ್ತು ಗಂಗಾ ನದಿ ಸ್ವಚ್ಛತಾ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳುವಂತೆ ಒತ್ತಾಯಿಸಿ ಅರ್ಚಕರ ನಿಯೋಗದೊಂದಿಗೆ ಶೀಘ್ರದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವುದಾಗಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು ಮತ್ತು ದೇಶದ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಪ್ರಧಾನಿಯವರ ಮೇಲೆ ಒತ್ತಾಯ ಹೇರಲಿದ್ದೇವೆ. ಧಾರ್ಮಿಕ ವಿಷಯಗಳನ್ನು ಹೊರತುಪಡಿಸಿ ಇಂದು ದೇಶ ಬೇರೆ ಹಲವು ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕಿದೆ ಎಂದರು.
ಜೈನರು, ಬುದ್ಧರು ಅಥವಾ ಸಿಖ್ಖರಾಗಿರಲಿ ಎಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರು. ಯಾಕೆಂದರೆ ಭರತ ಖಂಡದ ಹಿಂದಿನ ಸನ್ಯಾಸಿಗಳು, ಋಷಿಗಳು ಹಿಂದೂ ಧರ್ಮದಿಂದಲೇ ಬಂದವರಾಗಿದ್ದಾರೆ. ನಂತರ ದೇಶದಲ್ಲಿ ಬ್ರಿಟಿಷರ ಆಳ್ವಿಕೆ ನಂತರ ಹಿಂದೂ ಧರ್ಮ ಒಡೆದು ಹೋಯಿತು ಎಂದು ಪೇಜಾವರ ಶ್ರೀಗಳು ಪ್ರತಿಪಾದಿಸಿದರು.
ಮೈಸೂರಿನ ಶ್ರೀ ಕೃಷ್ಣಧಾಮದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಅವರು, ಆಗಸ್ಟ್ 14ರಂದು ವೃತ ಮುಗಿದ ನಂತರ ಪ್ರಧಾನಿಯವರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…