ಕಾರ್ಕಳ: ಗೋ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರದ ಬಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭು ಪೊಲೀಸರು ಬಂಧಿಸಿದ್ದಾರೆ.ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ ಅನಿಲ್ ಪ್ರಭು ಬಂಧಿತ ಆರೋಪಿಯಾಗಿದ್ದಾನೆ.
ಕಳವುಗೈದ ಹಸುಗಳನ್ನು ವಧಿಸಿ ಅದರ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ದನಗಳನ್ನು ಕಳ್ಳತನ ಮಾಡುವರಿಗೆ ಈತ ಅಭಯ ನೀಡುತ್ತಿದ್ದ ಎಂಬ ಗಂಭೀರವಾದ ಆರೋಪವಿದೆ.
” ಪೊಲೀಸರಿಂದ ಯಾವುದೇ ರೀತಿ ತೊಂದರೆಯಾಗದಂತೆ ನಾನಿದ್ದೇನೆ” ಎಂದು ವಾಗ್ದಾನ ನೀಡಿ ಅವರಿಂದ ಪಾಲು ಪಡೆಯುತ್ತಿದ್ದನೆಂದು ತನಿಖೆಯ ವೇಳೆಗೆ ಹುಡ್ಕೋ ಕಾಲನಿಯ ಮೊಹಮ್ಮದ್ ಯಾಸೀನ್ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ. ಅದರನ್ವಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಪ್ರಭುನನ್ನು ಬಂಧಿಸಿದ್ದಾರೆ.
ನವಂಬರ್ 6ರಂದು ಕಾರ್ಕಳ ನಗರದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಹುಡ್ಕೋ ಕಾಲನಿಯ ಮೊಹಮ್ಮದ್ ಯಾಸೀನ್ ಎಂಬಾತನು ಬಂಗ್ಲೆಗುಡ್ಡೆಯಿಂದ ನಕ್ರೆ ಜಂಕ್ಷನ್ ಕಡೆಗೆ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭ ಪೊಲೀಸರು ವಾಹನ ನಿಲ್ಲಿಸಲು ಹೇಳಿದ್ದಾರೆ. ಆದರೆ, ಈ ಸಂದರ್ಭ ಆತ ತಪ್ಪಿಸಿಕೊಂಡಿದ್ದು, ಅರ್ಧದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದ. ವಾಹನ ಪರಿಶೀಲನೆ ನಡೆಸಿದ ಸಂದರ್ಭ ಪ್ಲಾಸ್ಟಿಕ್ ಚೀಲದ ಒಳಗೆ ದನದ ತಲೆ, ದನದ ಮಾಂಸ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡ್ಕೋ ಕಾಲನಿಯ ಮೊಹಮ್ಮದ್ ಯಾಸೀನ್ , ಜಯಂತಿನಗರದ ಜೀರ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…