ಕಾರ್ಕಳ: ಗೋ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರದ ಬಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭು ಪೊಲೀಸರು ಬಂಧಿಸಿದ್ದಾರೆ.ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ ಅನಿಲ್ ಪ್ರಭು ಬಂಧಿತ ಆರೋಪಿಯಾಗಿದ್ದಾನೆ.
ಕಳವುಗೈದ ಹಸುಗಳನ್ನು ವಧಿಸಿ ಅದರ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ದನಗಳನ್ನು ಕಳ್ಳತನ ಮಾಡುವರಿಗೆ ಈತ ಅಭಯ ನೀಡುತ್ತಿದ್ದ ಎಂಬ ಗಂಭೀರವಾದ ಆರೋಪವಿದೆ.
” ಪೊಲೀಸರಿಂದ ಯಾವುದೇ ರೀತಿ ತೊಂದರೆಯಾಗದಂತೆ ನಾನಿದ್ದೇನೆ” ಎಂದು ವಾಗ್ದಾನ ನೀಡಿ ಅವರಿಂದ ಪಾಲು ಪಡೆಯುತ್ತಿದ್ದನೆಂದು ತನಿಖೆಯ ವೇಳೆಗೆ ಹುಡ್ಕೋ ಕಾಲನಿಯ ಮೊಹಮ್ಮದ್ ಯಾಸೀನ್ ಪೊಲೀಸರಲ್ಲಿ ಬಾಯಿ ಬಿಟ್ಟಿದ್ದಾನೆ. ಅದರನ್ವಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಪ್ರಭುನನ್ನು ಬಂಧಿಸಿದ್ದಾರೆ.
ನವಂಬರ್ 6ರಂದು ಕಾರ್ಕಳ ನಗರದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಹುಡ್ಕೋ ಕಾಲನಿಯ ಮೊಹಮ್ಮದ್ ಯಾಸೀನ್ ಎಂಬಾತನು ಬಂಗ್ಲೆಗುಡ್ಡೆಯಿಂದ ನಕ್ರೆ ಜಂಕ್ಷನ್ ಕಡೆಗೆ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭ ಪೊಲೀಸರು ವಾಹನ ನಿಲ್ಲಿಸಲು ಹೇಳಿದ್ದಾರೆ. ಆದರೆ, ಈ ಸಂದರ್ಭ ಆತ ತಪ್ಪಿಸಿಕೊಂಡಿದ್ದು, ಅರ್ಧದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದ. ವಾಹನ ಪರಿಶೀಲನೆ ನಡೆಸಿದ ಸಂದರ್ಭ ಪ್ಲಾಸ್ಟಿಕ್ ಚೀಲದ ಒಳಗೆ ದನದ ತಲೆ, ದನದ ಮಾಂಸ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡ್ಕೋ ಕಾಲನಿಯ ಮೊಹಮ್ಮದ್ ಯಾಸೀನ್ , ಜಯಂತಿನಗರದ ಜೀರ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…
ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…