ಮಣಿಪಾಲ: ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿ ಕೊಲೆ ಯತ್ನದ ವಿಚಾರವಾಗಿ ಸಚಿವ ಕೆಎಸ್ ಈಶ್ವರಪ್ಪ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಗೋರಕ್ಷಕರ ಆರೋಗ್ಯ ವಿಚಾರಿಸಿದರು.
ತದನಂತರ ಮಾಧ್ಯಮದವರ ಜೊತೆ ಮಾತನಾಡಿ ಯಾವುದೇ ಗೋರಕ್ಷಕರಿಗೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಸಂಘಟನೆ ಮತ್ತು ಸರ್ಕಾರ ಗಾಯಾಳುಗಳಿಗೆ ಸಹಕಾರ ನೀಡುತ್ತದೆ ಕುಟುಂಬದಿಂದ ಗಾಯಾಳುಗಳಿಗೆ ಒಂದು ಪೈಸೆಯೂ ಖರ್ಚಾಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದರು. ಗೋರಕ್ಷಣೆ ವಿಚಾರದಲ್ಲಿ ಕಾನೂನು ಸಮರ್ಥವಾಗಿದೆ ಪೊಲೀಸ್ ಇಲಾಖೆ ಇನ್ನಷ್ಟು ಬಿಗಿಯಾಗಬೇಕು ಗೋ ಹಂತಕರನ್ನು ಹಿಡಿಯಲು ಪೊಲೀಸರಿಗೂ ಭಯವಿದೆ ತಮ್ಮ ಕುಟುಂಬದ ಸದಸ್ಯರಿಗೆ ಏನಾದರೂ ಸಮಸ್ಯೆಯಾಗುತ್ತೆಂಬ ಜೀವಭಯದಿಂದ ಕೆಲಸ ಮಾಡುತ್ತಿದ್ದಾರೆ.ಇದರಿಂದಾಗಿ ಪೊಲೀಸ್ ಇಲಾಖೆಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದರು .
ಸಚಿವನಾಗಿ ನನಗೆ ಈಗಲೂ ಗೋಕಳ್ಳರ ವಿಚಾರದ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ಇದೆ ಹೆಂಡತಿ ಮಕ್ಕಳಿಗೆ ಏನಾದರೂ ಮಾಡಿದರೆ ಎಂಬ ಭಯವಿರುವ ಕಾರಣ ಸ್ವಲ್ಪ ಹಿಂಜರಿಯುತ್ತಿದ್ದಾರೆ .
“ಬಿಜೆಪಿ ಸರ್ಕಾರ ಬಂದ ನಂತರ ಗೋಹತ್ಯೆ ಸಂಪೂರ್ಣವಾಗಿ ನಿಂತಿಲ್ಲ ಇದನ್ನೆಲ್ಲಾ ನೋಡುವಾಗ ನನಗೂ ಹೊಟ್ಟೆ ಉರಿಯುತ್ತದೆ ಸಂಪೂರ್ಣವಾಗಿ ಗೋಹತ್ಯ ನಿಲ್ಲಿಸಲು ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ, ಬಲೆ ಹಾಕುತ್ತೇವೆ ಮತ್ತು ಬಲಿತೆಗೆದುಕೊಳ್ಳುತ್ತೆವೆ “ಎಂದು ಈಶ್ವರಪ್ಪ ಹೇಳಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]