ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಈ ಹಿಂದಿನಿಂದಲ್ಲೂ ನಡೆಯುತ್ತಾ ಬಂದಿದೆ. ಆದರೆ ಈಗ ನಾವು ಸುಮ್ಮನಿರಲು ಸಾಧ್ಯವಿಲ್ಲ. ಈ ರೀತಿಯ ಪ್ರಕರಣ ಮುಂದುವರಿದರೆ ಗೋ ಕಳ್ಳರ ಮೇಲೆ ಸರ್ಕಲ್ ನಲ್ಲಿ ನಿಲ್ಲಿಸಿ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಗೋ ಕಳ್ಳತನ ಹೊಸದೇನು ಅಲ್ಲ. ಬಿಜೆಪಿ ಸರಕಾರದಲ್ಲೂ ಸಾಕಷ್ಟು ಗೋ ಕಳ್ಳತನ ಪ್ರಕರಣಗಳಾಗಿವೆ. ಆದರೆ ಅವರು ಸುಮ್ಮನಾಗಿದ್ದರು ಅಂತಾ ನಾವು ಸುಮ್ಮನಿರೋದಕ್ಕೆ ಆಗಲ್ಲ ಎಂದಿದ್ದಾರೆ. ಜಿಲ್ಲೆಯಲ್ಲಿ ಗೋ ಕಳ್ಳತನ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ವಿಷಯದ ಬಗ್ಗೆ ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನ ಟಿಕೀಸಿದ್ದಾರೆ. ಇವರ ಸರಕಾರ ಇರುವಾಗ ಇನ್ನೂ ಅಧಿಕ ಗೋವು ಕಳ್ಳತವಾಗಿದೆ. ಆದರೆ ಯಾವುದೇ ರೀತಿಯಾದ ಕ್ರಮವಾಗಿರಲಿಲ್ಲ. ಆದರೆ ಈಗ ನಾವು ಯಾವುದೇ ಮುಲಾಜಿಲ್ಲದೆ ಗೋ ಕಳ್ಳರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ನಾವು ಹೇಳಿದ್ದೇ ಮಾಡುತ್ತೇವೆ. ಇನ್ನು ಮುಂದೆ ಜಿಲ್ಲೆಯಲ್ಲಿ ಗೋವು ಕಳ್ಳತನ ಮಾಡಿದವ ಮೇಲೆ ಸೂಕ್ತ ಕ್ರಮ ಜಾರಿ ಮಾಡುವಂತೆ ಸೂಚಿಸಲಾಗಿದೆ ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…