ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಈ ಹಿಂದಿನಿಂದಲ್ಲೂ ನಡೆಯುತ್ತಾ ಬಂದಿದೆ. ಆದರೆ ಈಗ ನಾವು ಸುಮ್ಮನಿರಲು ಸಾಧ್ಯವಿಲ್ಲ. ಈ ರೀತಿಯ ಪ್ರಕರಣ ಮುಂದುವರಿದರೆ ಗೋ ಕಳ್ಳರ ಮೇಲೆ ಸರ್ಕಲ್ ನಲ್ಲಿ ನಿಲ್ಲಿಸಿ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಗೋ ಕಳ್ಳತನ ಹೊಸದೇನು ಅಲ್ಲ. ಬಿಜೆಪಿ ಸರಕಾರದಲ್ಲೂ ಸಾಕಷ್ಟು ಗೋ ಕಳ್ಳತನ ಪ್ರಕರಣಗಳಾಗಿವೆ. ಆದರೆ ಅವರು ಸುಮ್ಮನಾಗಿದ್ದರು ಅಂತಾ ನಾವು ಸುಮ್ಮನಿರೋದಕ್ಕೆ ಆಗಲ್ಲ ಎಂದಿದ್ದಾರೆ. ಜಿಲ್ಲೆಯಲ್ಲಿ ಗೋ ಕಳ್ಳತನ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ವಿಷಯದ ಬಗ್ಗೆ ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನ ಟಿಕೀಸಿದ್ದಾರೆ. ಇವರ ಸರಕಾರ ಇರುವಾಗ ಇನ್ನೂ ಅಧಿಕ ಗೋವು ಕಳ್ಳತವಾಗಿದೆ. ಆದರೆ ಯಾವುದೇ ರೀತಿಯಾದ ಕ್ರಮವಾಗಿರಲಿಲ್ಲ. ಆದರೆ ಈಗ ನಾವು ಯಾವುದೇ ಮುಲಾಜಿಲ್ಲದೆ ಗೋ ಕಳ್ಳರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ನಾವು ಹೇಳಿದ್ದೇ ಮಾಡುತ್ತೇವೆ. ಇನ್ನು ಮುಂದೆ ಜಿಲ್ಲೆಯಲ್ಲಿ ಗೋವು ಕಳ್ಳತನ ಮಾಡಿದವ ಮೇಲೆ ಸೂಕ್ತ ಕ್ರಮ ಜಾರಿ ಮಾಡುವಂತೆ ಸೂಚಿಸಲಾಗಿದೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…