ಚಿಕ್ಕಮಗಳೂರು,: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವರ್ಸಸ್ ಮಾಜಿ ಶಾಸಕ ಸಿ.ಟಿ ರವಿ ನಡುವೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಫೈಟ್ ಜೋರಾಗಿದೆ. ಗೋ ಬ್ಯಾಕ್, ಶೋಭಾ ಹಾಠಾವೋ ಎಂದು ಸಿ,ಟಿ.ರವಿ ಬೆಂಬಲಿಗರು ಅಭಿಯಾನ ನಡೆಸಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ.
ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ದಂಗಲ್ ಆರಂಭ ಮಾಡಿದ್ದಾರೆ. ಶೋಭಾ ವಿರುದ್ಧ ಗೋ ಬ್ಯಾಕ್ ಶೋಭಾ ,ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ನಡೆಯುತ್ತಿದೆ. ಟಿಕೆಟ್ ನೀಡದಂತೆ ಕ್ಯಾಂಪೇನ್ ನಡೆಸಲಾಗಿದೆ. ಇದು ಬಿಜೆಪಿ ಹೈ ಕಮಾಂಡ್ ಕೋಪಕ್ಕೂ ಕಾರಣವಾಗಿದೆ. ಇದೆಲ್ಲದರ ನಡುವೆ ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲಾಗಿದೆ. ಬಸವನಹಳ್ಳಿ ಪೊಲೀಸರಿಂದ ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ಶೋಭಕ್ಕ ಎಲ್ಲಿದ್ದೀರ?, ಶೋಭಕ್ಕ ಕಾಣೆ ಎಂದು ತರೀಕೆರೆಯಿಂದ ಚಿಕ್ಕಮಗಳೂರುವರೆಗೂ ರಾತ್ರೋರಾತ್ರಿ ಪೋಸ್ಟರ್ಗಳನ್ನು ಅಂಟಿಸಿದ್ದ ನಾಲ್ವರು ಯುವಕರಾದ ಸಂಜು, ಸಂಜಯ್, ವಿಷ್ಣು, ಚಂದ್ರಶೇಖರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಯುವಕರು ತರೀಕೆರೆ ಮೂಲದವರು. ತರೀಕೆರೆ ಪಟ್ಟಣದಿಂದ ಚಿಕ್ಕಮಗಳೂರು ನಗರದ ವರೆಗೂ ಪೋಸ್ಟರ್ ಅಂಟಿಸಿದ್ದರು. ನಗರ ಸಭೆ ಪೌರ ಕಾರ್ಮಿಕ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಇನ್ನು ಯುವಕರು ಹಣ ನೀಡಿ ಪೋಸ್ಟರ್ ಅಂಟಿಸಲು ಹೇಳಿದ್ರು ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಸವನಹಳ್ಳಿ ಪೊಲೀಸರು ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…