Featured

ಗೋ ಮಾಂಸ ರಫ್ತು ಮಾಡುವವರಲ್ಲಿ ಬಹುತೇಕ ಬಿಜೆಪಿ ಬೆಂಬಲಿಗರೇ ಇದ್ದಾರೆ ; ಸಿದ್ದರಾಮಯ್ಯ -Vishwanews24

ಗೋ ಮಾಂಸ ರಫ್ತು ಮಾಡುವವರಲ್ಲಿ ಬಹುತೇಕ ಬಿಜೆಪಿ ಬೆಂಬಲಿಗರು; ಸಿದ್ದರಾಮಯ್ಯ -Vishwanews24

ಬೆಂಗಳೂರು: ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ಬಿಜೆಪಿಯವರು ಸದನದಲ್ಲಿ ಏಕಾಏಕಿ ವಿಧೇಯಕ ಮಂಡನೆ ಮಾಡಿದರು. 1964ರ ಕಾಯ್ದೆಗೆ ಅನೇಕ ತಿದ್ದುಪಡಿ ಮಾಡಿದ್ದಾರೆ. ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ 1964ರಂದ ಅಸ್ಥಿತ್ವದಲ್ಲಿದೆ. ಅದರಲ್ಲಿ ಯಾವ ಪ್ರಾಣಿಗಳನ್ನು ವಧೆ ಮಾಡಬಹುದೆಂದು ತಿಳಿಸಿದೆ. 12 ವರ್ಷ ತುಂಬಿದ್ದರೆ ಅಂಥವನ್ನು ವಧೆ ಮಾಡಬಹುದು. ಹಸು ಅಥವಾ ಎಮ್ಮೆ ಗೊಡ್ಡಾದರೆ, ಹಾಲು ಕರೆಯದಿದ್ದರೆ ವಧೆ ಮಾಡಬಹುದು. ಪ್ರಾಣಿ ರೋಗಗ್ರಸ್ಥವಾಗಿದ್ದರೆ ತಿನ್ನಲು ಯೋಗ್ಯವಲ್ಲ. ಈ ಎಲ್ಲಾ ಅಂಶಗಳು ಆ ಕಾಯ್ದೆಯಲ್ಲಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮೋದಿಯವರು ಪ್ರಧಾನಿಯಾದ ಬಳಿಕ ಗೋ ಮಾಂಸ ರಫ್ತು ಪ್ರಮಾಣ ಏರಿಕೆಯಾಗಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಗೋ ಮಾಂಸ ರಫ್ತು ಮಾಡುವವರಲ್ಲಿ ಬಹುತೇಕ ಬಿಜೆಪಿ ಬೆಂಬಲಿತರೇ ಇದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ಈಗಾಗಲೇ ಇರುವ ಗೋಹತ್ಯೆ ನಿಷೇಧ ಕಾಯ್ದೆಗೆ ಈಗ ತಿದ್ದುಪಡಿ ತಂದಿದ್ದಾರೆ. ತಿದ್ದುಪಡಿಗೂ ಮುನ್ನ ಯಾವುದೇ ಅಧ್ಯಯನ ಮಾಡಿಲ್ಲ. ಅಧ್ಯಯನ ಮಾಡಿರುವ ವರದಿಯನ್ನೂ ನೋಡಿಲ್ಲ. ಕಾನೂನು ತರಬೇಕಾದರೆ ಸಾಧಕ, ಬಾಧಕಗಳನ್ನು ನೋಡಬೇಕು. ಕೇವಲ ಭಾವನಾತ್ಮಕವಾಗಿ ಈ ಕಾಯ್ದೆಯನ್ನು ತಂದಿದ್ದಾರೆ. ಜನರ ಭಾವನೆಗಳನ್ನು ಕೆರಳಿಸಲು ಇದನ್ನು ತಂದಿದ್ದಾರೆ. ವೈಜ್ಞಾನಿಕವಾಗಿ ಅಧ್ಯಯನ ಮಾಡದೆ ಕಾಯ್ದೆ ಜಾರಿಗೆ ತಂದಿದ್ದಾರೆ. ಈಗ ವಿಧೇಯಕವನ್ನು ಕಾನೂನು ಮಾಡ ಹೊರಟಿದ್ದಾರೆ ಎಂದು ರಾಜ್ಯ ಸರ್ಕಾರದ ನಡೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಿಧಾನಸಭಾಧ್ಯಕ್ಷರೂ ಕೂಡಾ ಆರ್‌ಎಸ್‌ಎಸ್‌ಗೆ ಬೆಂಬಲ ನೀಡುವ ಕಾರಣ ಗೋ ಹತ್ಯೆ ನಿಷೇಧ ವಿಧೇಯಕ ಪಾಸ್ ಆಗಿದೆ ಎಂಬ ಆರೋಪವನ್ನೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿದ್ದಾರೆ. ದೇಶದ ಅನೇಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಇಲ್ಲ, ರಾಜ್ಯಕ್ಕೆ ಮಾತ್ರ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದೇಶಕ್ಕೇ ಒಂದು ಪಾಲಿಸಿ, ಕರ್ನಾಟಕ ಹಾಗೂ ಉತ್ತರ ಪ್ರದೇಶ ಮಾತ್ರ ಮತ್ತೊಂದು ನೀತಿ ಏಕೆ ಎಂದು ಸವಾಲೆಸೆದಿರುವ ಸಿದ್ದರಾಮಯ್ಯ, ಕೇರಳ, ಗೋವಾ, ಈಶಾನ್ಯ ರಾಜ್ಯಗಳಲ್ಲಿ ಏಕೆ ಕಾಯ್ದೆ ಜಾರಿ ಇಲ್ಲ ಎಂದು ಪ್ರಶ್ನಿಸಿದ್ದಾರೆ.

ಗೋ ಮಾತೆ ಅಂತ ಪೂಜೆ ಮಾಡಿದರೆ ಆಗೋಯ್ತೇ? ನಾವು ಸಂಕ್ರಾಂತಿಯಲ್ಲಿ ಗೋ ಪೂಜೆ ಮಾಡುತ್ತೇವೆ. ದೀಪಾವಳಿ ಹಬ್ಬದಲ್ಲೂ ಎಡೆ ಹಾಕುತ್ತೇವೆ. ಸಾಕುವವರು ಅವುಗಳಿಗೆ ಪೂಜೆ ಮಾಡುತ್ತಾರೆ. ಯಾರು ಸಾಕೋದಿಲ್ಲ ಅವರು ಈ ಕಾನೂನು ತರ್ತಾರೆ. ಇದು ರೈತರ ಮೇಲೆ ಮತ್ತಷ್ಟು ಸಂಕಷ್ಟ ತಂದಿಡಲಿದೆ. ರೈತರು ಹಸು ಸಾಕೋದಕ್ಕೂ ಮುಂದೆ ಕಷ್ಟವಾಗಲಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago