Featured

ಗೋ ವ್ಯಾಪಾರಿಗಳ ಆಸ್ತಿ ಮುಟ್ಟುಗೋಲು ಮಾಡಿ ಸಂಘಪರಿವಾರದ ನಾಯಕರ ಮೆಚ್ಚುಗೆ ಗಳಿಸಿ ಶಾಸಕ ಭರತ್ ಶೆಟ್ಟಿಯಿಂದ ಪುನಃ ಟಿಕೆಟ್ ಪಡೆಯುವ ಹುನ್ನಾರ  : SDPI – Vishwanews24

ಗೋ ವ್ಯಾಪಾರಿಗಳ ಮನೆ, ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ: ಎಸ್‌ಡಿಪಿಐ ಆಕ್ರೋಶ

ಮಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ ಅಕ್ರಮ ಜಾನುವಾರು ಮಾಂಸಕ್ಕಾಗಿ ವಧೆ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ಮೂವರು ವ್ಯಾಪಾರಿಗಳ ಮನೆ ಮತ್ತು ಅಂಗಡಿಯನ್ನು ಶಾಸಕ ಭರತ್ ಶೆಟ್ಟಿ ಒತ್ತಡದ ಮೇರೆಗೆ ದ.ಕ ಜಿಲ್ಲಾಡಳಿತ ಮುಟ್ಟುಗೋಲು ಹಾಕಿದ ನಡೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಅವರು, ಶಾಸಕ ಭರತ್ ಶೆಟ್ಟಿ ಕ್ಷೇತ್ರವು ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಹಾಗೂ ಕೊರೋನಾ ಸಂದರ್ಭದಲ್ಲಿ ಮೃತಪಟ್ಟ ಹಿಂದು ಮಹಿಳೆಯೊಬ್ಬಳ ಹೆಣವನ್ನು ಶವಸಂಸ್ಕಾರ ಮಾಡಲು ರುದ್ರಭೂಮಿಯಲ್ಲಿ ಅವಕಾಶ ನೀಡಲಿಲ್ಲ. ಆ ಶವವನ್ನು ರಾತ್ರಿಯಿಡೀ ಮಂಗಳೂರು ನಗರದಲ್ಲಿ ಸುತ್ತಾಡುವಂತೆ ಮಾಡಿದ್ದರು. ಇದರಿಂದ ಭರತ್ ಶೆಟ್ಟಿಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಇವರಿಗೆ ಈ ಬಾರಿ ಟಿಕೆಟ್ ಸಿಗುವುದು ಸಂಶಯ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಾ ಇದೆ. ಇವರು ತಮ್ಮ ಶಾಸಕ ಸ್ಥಾನದ ಅಧಿಕಾರವನ್ನು ದುರುಪಯೋಗ ಪಡಿಸಿ ಗೋ ವ್ಯಾಪಾರಿಗಳ ಮನೆಯನ್ನು ಮತ್ತು ಅಂಗಡಿಯನ್ನು ಮುಟ್ಟುಗೋಲು ಹಾಕಿ ಗೂಂಡಾ ರಾಜ್ಯ ಎಂಬ ಕುಖ್ಯಾತಿ ಹೊಂದಿರುವ ಯೋಗಿಯ ಯುಪಿ ಮಾದರಿಯಂತೆ ಮಾಡಿ ಸಂಘಪರಿವಾರದ ನಾಯಕರ ಮೆಚ್ಚುಗೆ ಗಳಿಸಿ ಪುನಃ ಟಿಕೆಟ್ ಪಡೆಯುವ ಹುನ್ನಾರವಾಗಿದೆ. ಈ ಘಟನೆಯು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ, ಮನೆ ಮುಟ್ಟುಗೋಲು ಹಾಕಬೇಕೆಂಬ ಮನವಿಯಲ್ಲಿ ಅಕ್ರಮವಾಗಿ ದನವನ್ನು ಹತ್ಯೆ ಮಾಡುವುದರಿಂದ ಕೋಮು ಗಲಭೆಯ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಕಾಪುವಿನಲ್ಲಿ ದೀಪಾವಳಿಯ ರಂಗು ಹೆಚ್ಚಿಸಿದ ಶ್ರೀಶಾ ನಾಯಕ್ ನೇತೃತ್ವದ ಗೂಡುದೀಪ ಸ್ಪರ್ಧೆ..

ಕೋಮು ಗಲಭೆಯ ತಡೆಗಾಗಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆಯನ್ನು ತಂದಿರುವುದಲ್ಲ “ಕೃಷಿ ಮತ್ತು ಪಶು ಸಂಗೋಪನೆಯ ಅಭಿವೃದ್ಧಿಯ ಉದ್ದೇಶಕ್ಕಾಗಿ ಈ ಕಾಯಿದೆಯನ್ನು ಜಾರಿಗೆ ತರಲಾಗಿದೆ ಎಂದು ಕಾಯಿದೆಯಲ್ಲಿ ಉಲ್ಲೇಖಿಸಿದ್ದನ್ನು ಜಿಲ್ಲಾಡಳಿತ ಗಮನಿಸಬೇಕು. ಇಲ್ಲಿ ಮನೆ ಮುಟ್ಟುಗೋಲು ಹಾಕಿದ್ದು ಅಲ್ಲದೇ ಅದರ ಆರ್ ಟಿ ಸಿ ಯನ್ನು ಸರಕಾರದ ಹೆಸರಿನಲ್ಲಿ ಬದಲಾವಣೆ ಮಾಡಿ ಜಿಲ್ಲಾಡಳಿತ ಸರ್ವಾಧಿಕಾರಿ, ದಬ್ಬಾಳಿಕೆಯ ನೀತಿಯನ್ನು ಅನುಸರಿಸುತ್ತಿರುವುದು ಅಕ್ಷ್ಯಮ್ಯ ಅಪರಾಧವಾಗಿದೆ ಎಂದರು.

ದ.ಕ ಜಿಲ್ಲಾಡಳಿತ ಶಾಸಕರ ಇಂತಹ ಕಾನೂನು ವಿರೋಧಿ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ವರ್ತಿಸಬೇಕೆಂದು ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಾಪುರ: ಓದುತ್ತಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತದಿಂದ 13 ವರ್ಷದ ಬಾಲಕಿ ಮೃತ್ಯು – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago