ಉಡುಪಿ : ರಾಜ್ಯದ “ಎ’ ದರ್ಜೆಯ 25 ಶ್ರೀಮಂತ ದೇಗುಲಗಳಲ್ಲಿ ಮುಜರಾಯಿ ಇಲಾಖೆ ವತಿಯಿಂದ ಗೋ ಸಂರಕ್ಷಣೆ ಕೇಂದ್ರ ತೆರೆಯಲು ಇಲಾಖೆ ನಿಶ್ಚಯಿಸಿದ್ದು, ಪ್ರಸ್ತಾವನೆ ಸಲ್ಲಿಕೆಯಾಗಿದೆ. ದೇಶೀ ಗೋ ಸಂರಕ್ಷಣೆ ಇದರ ಪ್ರಮುಖ ಉದ್ದೇಶ. ಜತೆಗೆ ಅಕ್ರಮ ಸಾಗಾಟ ಸಂದರ್ಭ ವಶಪಡಿಸಿಕೊಂಡ ಜಾನುವಾರುಗಳು, ಅತಿವೃಷ್ಟಿ, ಅನಾವಷ್ಟಿಯಿಂದ ಮೇವಿನ ಕೊರತೆಯಾಗಿ ಸಾವನ್ನಪ್ಪುವ ಸ್ಥಿತಿಯಲ್ಲಿರುವವು, ವಯಸ್ಕ, ಕಾಯಿಲೆಪೀಡಿತ ಗೋವುಗಳ ರಕ್ಷಣೆಯೂ ಸೇರಿದೆ.
ಹೊಸನಗರ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಗೋಸ್ವರ್ಗದ ಪರಿಕಲ್ಪನೆ ಮತ್ತು ಗೋಸೇವೆಯಲ್ಲಿ ತೊಡಗಿಸಿಕೊಂಡ ನಾಡಿನ ಇತರ ಸಾಧು-
ಸಂತರು, ಧಾರ್ಮಿಕಮುಖಂಡರ ಮಾರ್ಗದರ್ಶನದಲ್ಲಿ ಯೋಜನೆಗೆ ಅಂತಿಮರೂಪ ನೀಡಲಾಗುತ್ತಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ರಾಜ್ಯದ ಕೆಲವು ಗೋಸರಂಕ್ಷಣ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ, ಜಾನುವಾರುಗಳು ಸಂಕಷ್ಟದಲ್ಲಿವೆ ಎನ್ನುವ ದೂರು ಆಗಾಗ ಕೇಳಿಬರುತ್ತಿದೆ. ಮುಜರಾಯಿ ಇಲಾಖೆಯಿಂದಲೇ ಸ್ಥಾಪನೆಯಾಗುವ ಕೇಂದ್ರಗಳಲ್ಲಿ ಅಂತಹ ಅವ್ಯವಸ್ಥೆ ಆಗಬಾರದು ಎಂಬುದಕ್ಕಾಗಿ ಆಹಾರ, ನೆಲೆ ಮತ್ತು ಆರೈಕೆಯಲ್ಲಿ ಯಾವುದೇ ಕೊರತೆ ಎದುರಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ತಜ್ಞರ ಸಲಹೆ ಪಡೆದು ಸೌಲಭ್ಯಗಳ ಕುರಿತು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.
ಗೋಸಂರಕ್ಷಣೆಗಾಗಿ ಮುಜರಾಯಿ ಇಲಾಖೆಯ ಎ ದರ್ಜೆಯ 25 ದೇಗುಲಗಳಲ್ಲಿ ಪ್ರಾಯೋಗಿಕವಾಗಿ ಗೋಶಾಲೆಗಳನ್ನು ತೆರೆದು ಬಳಿಕ ಹಂತಹಂತವಾಗಿ ವಿಸ್ತರಿಸಲಾಗುವುದು. ಇದಕ್ಕೆ ಹಣಕಾಸಿನ ಸಮಸ್ಯೆ ಎದುರಾಗದು. ಶೀಘ್ರವಾಗಿ ಯೋಜನೆ ಕಾರ್ಯಗತಗೊಳ್ಳಲಿದೆ.
– ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಮುಜರಾಯಿ ಸಚಿವರು
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…