Featured

ಗೋ ಹತ್ಯೆ ತಡೆಯುವ ಕಾನೂನು ಇಂದಿರಾ ಗಾಂಧಿ ಆಡಳಿತದಲ್ಲಿ ತಂದಿರುವುದೇ ಹೊರತು ಬಿಜೆಪಿಯು ಒಂದೇ ಒಂದು ಕಾನೂನು ಜಾರಿಗೆ ತಂದಿಲ್ಲ : ಖಾದರ್ -Vishwanews24

ಗೋ ಹತ್ಯೆ ತಡೆಯುವ ಕಾನೂನು ಇಂದಿರಾ ಗಾಂಧಿ ಆಡಳಿತದಲ್ಲಿ ತಂದಿರುವುದೇ ಹೊರತು ಬಿಜೆಪಿಯು ಒಂದೇ ಒಂದು ಕಾನೂನು ಜಾರಿಗೆ ತಂದಿಲ್ಲ : ಖಾದರ್ -Vishwanews24

ಇತರೆ ಕಾನೂನು ರಾತ್ರಿ ಬೆಳಗಾಗುವುದರೊಳಗೆ ಜಾರಿಗೆ ತಂದಿದ್ದೀರಿ, ಗೋ ಹತ್ಯೆ ನಿಷೇಧ ತಡವೇಕೆ ??

ಮಂಗಳೂರು: ರಾಜ್ಯದಲ್ಲೀಗ ಗೋ ಹತ್ಯಾ ನಿಷೇಧ ಕಾನೂನಿನ ಬಗ್ಗೆ ಭಾರಿ ಚರ್ಚೆ ನಡೆಯುತ್ತಲಿದೆ. ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳುತ್ತಲ್ಲೇ ಇದ್ದು ಈವರೆಗೂ ಜಾರಿಗೆ ಬಂದಿಲ್ಲ. ಗೋ ಹತ್ಯಾ ನಿಷೇಧ ಕಾನೂನು ಜಾರಿಗೆ ತರಲಾಗುವುದು ಎಂದು ನಿರಂತರವಾಗಿ ಹೇಳುತ್ತಲ್ಲೇ ಇರುವ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಖಾದರ್‌, ”ಎಪಿಎಂಸಿ ಕಾನೂನು ರಾತ್ರಿ ಬೆಳಗಾಗುವುದರೊಳಗೆ ತಂದಿದ್ದೀರಿ. ನಿಮಗೆ ಎಲ್ಲಾ ಕಾನೂನನ್ನು ರಾತ್ರಿ ಬೆಳಗಾಗುವುದರೊಳಗೆ ಜಾರಿಗೆ ತರಲಾಗುತ್ತದೆ. ಆದರೆ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಲು ತಡವೇಕೆ” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ”ರಾಜ್ಯದಲ್ಲೀಗ ನಿಮ್ಮದೇ ಸರ್ಕಾರವಿದೆ. ಹಾಗಿರುವಾಗ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರುವ ಬಗ್ಗೆ ಎರಡು ತಿಂಗಳಿನಿಂದ ಬರೀ ಚರ್ಚೆ ಯಾಕೆ? ಈ ಬಗ್ಗೆ ಸಂಪುಟ ಪ್ರಸ್ತಾಪ ಮಾಡಿ, ಚರ್ಚಿಸುವ” ಎಂದು ಬಿಜೆಪಿಗೆ ಸವಾಲೆಸೆದಿದ್ದಾರೆ.

”ಈ ಗ್ರಾಮ ಪಂಚಾಯತಿ ಚುನಾವಣೆ ಸಮೀಪವಾಗುತ್ತಿರುವ ನಿಟ್ಟಿನಲ್ಲಿ ಬಿಜೆಪಿಯು ಬರೀ ಭಾವಾನಾತ್ಮಕ ವಿಚಾರಗಳನ್ನು ತೆಗೆದುಕೊಂಡು ಬಂದು ಜನರನ್ನು ವಿಭಜಿಸಿ ಮತ ಪಡೆಯುವ ತಂತ್ರ ನಡೆಸುತ್ತಿದೆ. ಬದಲಾಗಿ ಅವರು ಈ ಕಾನೂನನ್ನು ಜಾರಿ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

”ಗೋ ಹತ್ಯೆ ನಿಷೇಧ ತರುತ್ತೇವೆ ಎಂದು ಹಲವು ವರ್ಷಗಳಿಂದ ಹೇಳಿಕೊಂಡೇ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಬಿಜೆಪಿ ಸರ್ಕಾರ ಬಂದ ಬಳಿಕ ಭಾರತದಿಂದಲ್ಲೇ ವಿದೇಶಗಳಿಗೆ ಹೆಚ್ಚು ಗೋ ಮಾಂಸ ರಫ್ತಾಗುತ್ತಿದೆ. ಆದರೆ ಅವರಿಗೆ ಕಾನೂನು ಜಾರಿಗೆ ತರಲು ಆಗಿದೆಯೇ? ಗೋ ಹತ್ಯೆ ತಡೆಯುವ ಕಾನೂನು ಇಂದಿರಾ ಗಾಂಧಿ ಆಡಳಿತದಲ್ಲಿ ತಂದಿರುವುದೇ ಹೊರತು ಬಿಜೆಪಿಯು ಒಂದೇ ಒಂದು ಕಾನೂನು ಜಾರಿಗೆ ತಂದಿಲ್ಲ” ಎಂದಿದ್ದಾರೆ.

”ರಾಜ್ಯದಲ್ಲಿ ಇಷ್ಟು ವರ್ಷ ಬಿಜೆಪಿ ಸರ್ಕಾರವಿದೆ. ಈವರೆಗೆ ಅವರು ಯಾಕೆ ಈ ಕಾನೂನುಗಳ ಬಗ್ಗೆ ಮಾತನಾಡಿಲ್ಲ. ಬರೀ ಜನರಲ್ಲಿ ಗೊಂದಲ ಮೂಡಿಸಲು ಈ ವಿಚಾರಗಳನ್ನು ಮಾತನಾಡುತ್ತಾರೆ. ಬರೀ ಹೊರಗಡೆ ಈ ಕಾನೂನುಗಳ ಬಗ್ಗೆ ಮಾತನಾಡುವುದರ ಹೊರತಾಗಿ ಸಂಪುಟದಲ್ಲಿ ಈ ವಿಚಾರದ ತನ್ನಿ ನಾವು ಚರ್ಚೆ ನಡೆಸುತ್ತೇವೆ. ಅದರ ಬದಲಾಗಿ ಜನರ ನಡುವೆ ಈ ವಿಚಾರ ತಂದು ಗಲಭೆ ಎಬ್ಬಿಸುವುದೇಕೆ?” ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago