ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿ ಪರಿಷತ್ ನಲ್ಲಿ ಅವಕಾಶ ಸಿಗದ ಕಾರಣ ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ನಡೆದ ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿದ ಸಚಿವ ಪ್ರಭು ಚೌಹಾಣ್, ಗೋವು ನಮ್ಮ ಭಾರತೀಯ ಸಂಸ್ಕೃತಿಯ, ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನೀಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತದೆ. ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 2010ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು ಆದರೆ 2020ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ 13 ವರ್ಷದ ಎಮ್ಮೆ/ಕೋಣಗಳಿಗೆ ನಿರ್ಬಂಧ ವಿರುತ್ತದೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಇದ್ದ ಆಕ್ಷೇಪಕಣೆ ಇಲ್ಲಿ ಪರಿಗಣನೆಗೆ ತೆಗೆದುಕೊಂಡು ಮಸೂದೆ ರೂಪಿಸಲಾಗಿದೆ ಹೀಗಿದ್ದಾಗಲೂ ಇದನ್ನು ಕಾಂಗ್ರೆಸ್ ವಿರೊಧಿಸುತ್ತಿರುವುದು ನಾಚಿಕೆಗೇಡು.
2019ರ ಜಾನುವಾರು ಗಣತಿ ಪ್ರಕಾರ 2, 38, 296 ಗೋವುಗಳನ್ನು ಪ್ರತಿವರ್ಷ ವಧೆ ಮಾಡಲಾಗುತ್ತಿದೆ. ಒಂದು ದಿನದ ವಿಳಂಬವು 662 ಗೋವುಗಳ ವಧೆಗೆ ಕಾರಣವಾಗುತ್ತದೆ ಇದು ಎಚ್ಚರಿಕೆಯ ಗಂಟೆ ಇದೇ ವೇಗದಲ್ಲಿ ಗೋವುಗಳ ವಧೆ ನಡೆಯುತ್ತ ಹೋದರೆ ಮುಂದಿನ ದಿನಗಳಲ್ಲಿ ಗೋವುಗಳನ್ನು ಪುಸ್ತಕಗಳಲ್ಲಿ ನೋಡುವ ಸಮಯ ದೂರವಿಲ್ಲ. ಅಕ್ರಮ ಗೋವುಗಳ ಸಾಗಣೆ ಮತ್ತು ವಧೆ ತಡೆಯುವುದು ನಮ್ಮ ತುರ್ತು ಆದ್ಯತೆಯಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಜಾರಿಗೆ ಬಂದರೆ ಈ ಅಕ್ರಮಗಳಿಗೆ ಕಡಿವಾಣ ಬೀಳಲಿದೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…