ಮಂಗಳೂರು : ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಕರಾವಳಿಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ಕುರಿತಂತೆ ನಾವು ಮಾತುಕತೆ ನಡೆಸಿ ಠರಾವು ಮಂಡಿಸಿದ್ದು, ಒಂದು ವೇಳೆ ಇವುಗಳನ್ನು ಸರಕಾರ ರದ್ದುಗೊಳಿಸಿದರೆ ಸಾಮಾಜದಲ್ಲಿ ಸಾಮರಸ್ಯಕ್ಕೆ ತೊಂದರೆ ಉಂಟಾಗಲಿದೆ. ಇದಕ್ಕೆ ಸರಕಾರ ಖಂಡಿತಾ ಅವಕಾಶ ನೀಡದಿರಲಿ. ಗೋಹತ್ಯೆ, ಮತಾಂತರ ಕಾಯಿದೆ ನಿಷೇಧ ಬಳಿಕ ಸಮಾಜದಲ್ಲಿ ಶಾಂತಿ-ನೆಮ್ಮದಿಯಿದೆ. ರಾಜ್ಯ ಸರಕಾರವು ಅದಕ್ಕೆ ಪೂರಕ ವಾತಾವರಣ ನಿರ್ಮಿಸಲಿ ಎಂದರು.
ಕರಾವಳಿ ಸ್ವಾಮೀಜಿಗಳು ಒಟ್ಟು ಸೇರಿ ಸಾಮೂಹಿಕ ನಿರ್ಣಯ ಮಾಡಿದ್ದು, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020ನ್ನು ರದ್ದುಗೊಳಿಸುವ ಪ್ರಸ್ತಾಪವ ಸಾಮೂಹಿಕವಾಗಿ ವಿರೋಧಿಸುವುದಾಗಿ ಹೇಳಿದರು.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…