ಮಂಗಳೂರು : ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಕರಾವಳಿಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ಕುರಿತಂತೆ ನಾವು ಮಾತುಕತೆ ನಡೆಸಿ ಠರಾವು ಮಂಡಿಸಿದ್ದು, ಒಂದು ವೇಳೆ ಇವುಗಳನ್ನು ಸರಕಾರ ರದ್ದುಗೊಳಿಸಿದರೆ ಸಾಮಾಜದಲ್ಲಿ ಸಾಮರಸ್ಯಕ್ಕೆ ತೊಂದರೆ ಉಂಟಾಗಲಿದೆ. ಇದಕ್ಕೆ ಸರಕಾರ ಖಂಡಿತಾ ಅವಕಾಶ ನೀಡದಿರಲಿ. ಗೋಹತ್ಯೆ, ಮತಾಂತರ ಕಾಯಿದೆ ನಿಷೇಧ ಬಳಿಕ ಸಮಾಜದಲ್ಲಿ ಶಾಂತಿ-ನೆಮ್ಮದಿಯಿದೆ. ರಾಜ್ಯ ಸರಕಾರವು ಅದಕ್ಕೆ ಪೂರಕ ವಾತಾವರಣ ನಿರ್ಮಿಸಲಿ ಎಂದರು.
ಕರಾವಳಿ ಸ್ವಾಮೀಜಿಗಳು ಒಟ್ಟು ಸೇರಿ ಸಾಮೂಹಿಕ ನಿರ್ಣಯ ಮಾಡಿದ್ದು, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020ನ್ನು ರದ್ದುಗೊಳಿಸುವ ಪ್ರಸ್ತಾಪವ ಸಾಮೂಹಿಕವಾಗಿ ವಿರೋಧಿಸುವುದಾಗಿ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…