ಬೆಂಗಳೂರು: ಸೇವೆಯ ಹೆಸರಲ್ಲಿ ರಾಜ್ಯದಲ್ಲಿ ಮತಾಂತರ ನಡೆಯುತ್ತಿತ್ತು,ಇದೀಗ ಮತಾಂತರ ನಿಷೇಧ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ವಿಚಾರವಾಗಿ ಮಾತನಾಡಿ, ಬಹಳ ಸಂತೋಷದ ವಿಚಾರವಿದು.ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಬಿಲ್ ಪಾಸ್ ಆಗಿತ್ತು. ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೆವು. ಈಗ ಬಿಲ್ ಎರಡು ಸದನದಲ್ಲಿ ಪಾಸ್ ಆಗಿದೆ ಎಂದರು.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಗೋ ಹತ್ಯೆ , ಮತಾಂತರ ನಿಷೇಧ ವಿಧೇಯಕ ಎರಡು ಇದೀಗ ಅಂಗೀಕಾರ ಆಗಿದೆ. ಇದರಿಂದ ವೈಯಕ್ತಿಕವಾಗಿ ಅತ್ಯಂತ ಸಂತೋಷವಾಗಿದೆ. ನಾನು ಗೃಹ ಸಚಿವನಾಗಿ ಬಿಲ್ ಮಂಡಿಸಿದ್ದೆ, ಇವಾಗ ಹೆಮ್ಮೆ ಆಗುತ್ತಿದೆ ಎಂದರು. ಹಿಂದೂ ಧರ್ಮದ ಬುಡ ಅಲ್ಲಾಡುತ್ತಿತ್ತು. ಮತಾಂತರದ ಮೂಲಕ ಧರ್ಮ ಒಡೆಯಲಾಗಿತ್ತು.
ಸೇವೆಯ ಹೆಸರಲ್ಲಿ ಮತಾಂತರ ಮಾಡಲಾಗಿತ್ತು. ಈಗ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದ ಅವರು, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಹಿಂದಿನಿಂದ ಮಾಡುತ್ತಾ ಬಂದಿದೆ. ಇವಾಗ ಕಾಂಗ್ರೆಸ್ ಮುಖವಾಡ ಈಗ ಕಳಚಿದೆ ಎಂದರು.
ಇನ್ನು ಮತಾಂತರ ನಿಷೇಧ ವಿಧೇಯಕದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೇಕ ವಿಧೇಯಕಗಳನ್ನು ಸರ್ಕಾರ ತರುತ್ತಿದೆ. ಆದರೆ ವಿಧೇಯಕಗಳ ಬಗ್ಗೆ ಗಂಭೀರವಾಗಿ ಚರ್ಚೆಯಾಗಬೇಕು. ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಆದರೆ ಉತ್ತರ ಕೊಡದೆ ಗೊಂದಲ ಮೂಡಿಸುತ್ತಿದ್ದಾರೆ ಎಂದರು.
ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ – Vishwanews24
ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಧಾರ್ಮಿಕ ಹಕ್ಕು ಸ್ವಾತಂತ್ರ್ಯ ವಿಧೇಯಕ ಗೊಂದಲದಲ್ಲಿದೆ. ಇದರಲ್ಲಿ ಸ್ವಾತಂತ್ರ್ಯ ಕೊಡುವ ಹಕ್ಕಿಲ್ಲ. ಇದು ಧಾರ್ಮಿಕ ಹಕ್ಕು ಕಸಿಯುವ ವಿಧೇಯಕ. ಆರ್ಟಿಕಲ್ 25, 28 ನಿಯಮಗಳನ್ನ ಉಲ್ಲಂಘಿಸಿದೆ.
ನಮ್ಮ ಧರ್ಮ ಆಚರಣೆ ಮಾಡುವ ಹಕ್ಕಿದೆ ನಮಗಿದೆ. ಎಲ್ಲರಿಗೂ ಅವರವರ ಧರ್ಮ ಆಚರಣೆ ಹಕ್ಕಿದೆ. ಆದರೆ ಇವಾಗ ಕಾಯ್ದೆಯಿಂದ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…