Featured

ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆಗಳನ್ನು ನಾನು ಗೃಹ ಸಚಿವನಾಗಿದ್ದಾಗ ಜಾರಿಗೊಳಿಸಿದ್ದಕ್ಕೆ ಹೆಮ್ಮೆಯಾಗುತ್ತಿದೆ : ಆರಗ ಜ್ಞಾನೇಂದ್ರ – Vishwanews24

ಮತಾಂತರದ ಮೂಲಕ ಧರ್ಮ ಒಡೆಯುವುದನ್ನು ಕಾಯ್ದೆಯ ಮೂಲಕ ತಪ್ಪಿಸಲಾಗಿದೆ.

ಬೆಂಗಳೂರು: ಸೇವೆಯ ಹೆಸರಲ್ಲಿ ರಾಜ್ಯದಲ್ಲಿ ಮತಾಂತರ ನಡೆಯುತ್ತಿತ್ತು,ಇದೀಗ ಮತಾಂತರ ನಿಷೇಧ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ವಿಚಾರವಾಗಿ ಮಾತನಾಡಿ, ಬಹಳ ಸಂತೋಷದ ವಿಚಾರವಿದು.ಬೆಳಗಾವಿ‌ ಅಧಿವೇಶನದ‌‌ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಬಿಲ್ ಪಾಸ್ ಆಗಿತ್ತು. ಸುಗ್ರೀವಾಜ್ಞೆ ಮೂಲಕ ಕಾಯ್ದೆ ತಂದಿದ್ದೆವು. ಈಗ ಬಿಲ್ ಎರಡು ಸದನದಲ್ಲಿ ಪಾಸ್ ಆಗಿದೆ ಎಂದರು.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗೋ ಹತ್ಯೆ , ಮತಾಂತರ ನಿಷೇಧ ವಿಧೇಯಕ ಎರಡು‌ ಇದೀಗ ಅಂಗೀಕಾರ ಆಗಿದೆ.‌ ಇದರಿಂದ ವೈಯಕ್ತಿಕವಾಗಿ ಅತ್ಯಂತ ಸಂತೋಷವಾಗಿದೆ. ನಾನು ಗೃಹ ಸಚಿವನಾಗಿ ಬಿಲ್ ಮಂಡಿಸಿದ್ದೆ, ಇವಾಗ ಹೆಮ್ಮೆ ಆಗುತ್ತಿದೆ ಎಂದರು. ಹಿಂದೂ ಧರ್ಮದ ಬುಡ ಅಲ್ಲಾಡುತ್ತಿತ್ತು. ಮತಾಂತರದ ಮೂಲಕ ಧರ್ಮ ಒಡೆಯಲಾಗಿತ್ತು.

ಸೇವೆಯ ಹೆಸರಲ್ಲಿ ಮತಾಂತರ ‌ಮಾಡಲಾಗಿತ್ತು. ಈಗ ಕಾಯ್ದೆ ಮೂಲಕ ಕಡಿವಾಣ ಹಾಕಲಾಗಿದೆ ಎಂದ ಅವರು, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಹಿಂದಿನಿಂದ ಮಾಡುತ್ತಾ ಬಂದಿದೆ. ಇವಾಗ ಕಾಂಗ್ರೆಸ್ ಮುಖವಾಡ ಈಗ ಕಳಚಿದೆ ಎಂದರು.

ಇನ್ನು ಮತಾಂತರ ನಿಷೇಧ ವಿಧೇಯಕದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೇಕ ವಿಧೇಯಕಗಳನ್ನು ಸರ್ಕಾರ ತರುತ್ತಿದೆ. ಆದರೆ ವಿಧೇಯಕಗಳ ಬಗ್ಗೆ ಗಂಭೀರವಾಗಿ ಚರ್ಚೆಯಾಗಬೇಕು. ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಆದರೆ ಉತ್ತರ ಕೊಡದೆ ಗೊಂದಲ ಮೂಡಿಸುತ್ತಿದ್ದಾರೆ ಎಂದರು.

ಈಡಿಗ ಸಮಾಜದ ಮಠಕ್ಕೆ 10 ಎಕರೆ ಜಮೀನು ಮಂಜೂರು: ಸಿಎಂ ಬೊಮ್ಮಾಯಿ – Vishwanews24

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಧಾರ್ಮಿಕ ಹಕ್ಕು ಸ್ವಾತಂತ್ರ್ಯ ವಿಧೇಯಕ ಗೊಂದಲದಲ್ಲಿದೆ. ಇದರಲ್ಲಿ ಸ್ವಾತಂತ್ರ್ಯ ಕೊಡುವ ಹಕ್ಕಿಲ್ಲ. ಇದು ಧಾರ್ಮಿಕ ಹಕ್ಕು ಕಸಿಯುವ ವಿಧೇಯಕ. ಆರ್ಟಿಕಲ್ 25, 28 ನಿಯಮಗಳನ್ನ ಉಲ್ಲಂಘಿಸಿದೆ.

ನಮ್ಮ‌ ಧರ್ಮ ಆಚರಣೆ ಮಾಡುವ ಹಕ್ಕಿದೆ ನಮಗಿದೆ. ಎಲ್ಲರಿಗೂ ಅವರವರ ಧರ್ಮ ಆಚರಣೆ ಹಕ್ಕಿದೆ. ಆದರೆ ಇವಾಗ ಕಾಯ್ದೆಯಿಂದ ಧಾರ್ಮಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

17 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

17 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

18 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

18 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

20 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

20 hours ago