ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಪೊಲೀಸ್ ಇಲಾಖೆ ಮಾರ್ಗಸೂಚಿ ರೂಪಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಕೂರಿಸಲು ವಿವಿಧ ಇಲಾಖೆಯಿಂದ ಅನುಮತಿ ಕಡ್ಡಾಯ ಮಾಡಿದ್ದು, ಕೆಲ ಅಂಶಗಳು ಗೊಂದಲಕ್ಕೆ ಎಡೆಮಾಡಿವೆ.
ಸೆ.13ರಂದು ಗಣೇಶ ಮೂರ್ತಿ ಕೂರಿಸುವ ಸ್ಥಳಗಳನ್ನು ಗುರುತಿಸಿ ಶಾಂತಿ ಸಭೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂತ್ ಸೂಚಿಸಿದ್ದಾರೆ. ಇದೇ ರೀತಿ ಸಂಘ-ಸಂಸ್ಥೆಗಳು ಪಾಲಿಸಬೇಕಾದ ಅಂಶಗಳನ್ನು ಉಲ್ಲೇಖಿಸಿದ್ದಾರೆ.
ಗಣೇಶ ಮೂರ್ತಿ ಕೂರಿಸುವ ಸಂಘ-ಸಂಸ್ಥೆಗಳ ಮುಖಂಡರು ಆಯಾ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬೇಕು. ವಿವಾದಾತ್ಮಕ ಸ್ಥಳಗಳಲ್ಲಿ ಗಣೇಶ ಕೂರಿಸಲು ಅವಕಾಶವಿಲ್ಲ. ವಾಹನಗಳ ಸಂಚಾರಕ್ಕೆ ಅಡ್ಡಿ ಆಗಬಾರದು. ರಾತ್ರಿ-ಹಗಲು ಕಾವಲಿಗೆ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಪೆಂಡಲ್ ಸಂಪೂರ್ಣ ಸೆರೆಯಾಗುವಂತೆ ಸಿಸಿ ಕ್ಯಾಮರಾ ಅಳವಡಿಸಬೇಕು. ಪೆಂಡಲ್ ಒಳಗೆ ಅಡುಗೆ ತಯಾರಿಗೆ ಅವಕಾಶವಿಲ್ಲ. ಪೆಂಡಲ್ ಪ್ರವೇಶ, ನಿರ್ಗಮ ದ್ವಾರ ಸುಗಮ ವಾಗಿರಬೇಕು. ಅಗತ್ಯ ಇದ್ದರೆ ಬ್ಯಾರಿಕೇಡ್ ಅಳವಡಿಸ ಬೇಕು. ಧ್ವನಿವರ್ಧಕದ ಸೌಂಡ್ ಹೆಚ್ಚಿಸಬಾರದು, ಸಾಂಸ್ಕೃತಿ ಕಾರ್ಯಕ್ರಮ ಆಯೋಜನೆಗೂ ಮೊದಲು ಪೊಲೀಸರ ಗಮನಕ್ಕೆ ತಂದು ಭದ್ರತೆ ಪಡೆಯುವಂತೆ ಸೂಚಿಸಿದ್ದಾರೆ.
ಮಸೀದಿ ಎದುರು ನಿಶ್ಯಬ್ದ
ಮೆರವಣಿಗೆ ಅನುಮತಿ ಕೊಡುವ ಮೊದಲು ಠಾಣಾಧಿಕಾರಿ ಮಾರ್ಗ ಪರಿಶೀಲಿಸಬೇಕು. ಪ್ರತಿವರ್ಷ ಸಾಗುವ ಮಾರ್ಗದಲ್ಲೇ ಮೆರವಣಿಗೆ ತೆರಳಬೇಕು. ಆ ಮಾರ್ಗದಲ್ಲಿ ಗುಂಡಿ, ಇನ್ನಿತರ ತೊಂದರೆ ಇದ್ದರೆ ಬದಲಾಯಿಸಬೇಕು. ಸಣ್ಣ ಮಾರ್ಗ, ವಿದ್ಯುತ್ ಕಂಬ ಇದ್ದರೆ ಮಾರ್ಗ ಬದಲಾಯಿಸಬೇಕು. ಸೂಕ್ಷ್ಮ ಪ್ರದೇಶದಲ್ಲಿ ತೆರಳುವಾಗ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಮಸೀದಿ ಮುಂಭಾಗ ಮೆರವಣಿಗೆ ತೆರಳುವಾಗ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಸಂಗೀತ ಹಾಕುವುದು, ಬಣ್ಣ ಎರಚುವುದು ಮಾಡಬಾರದು. ವಿದ್ಯುತ್ ಸಂಪರ್ಕಕ್ಕೆ ಜನರೇಟ್ ವ್ಯವಸ್ಥೆ ಮಾಡಬೇಕು. ಒಂದೇ ಬಣ್ಣದ ಟಿ-ಶರ್ಟ್ ಧರಿಸುವುದು ಅನುಕೂಲಕರ.
ಹಲವು ಅನುಮತಿ ಕಡ್ಡಾಯ
ಗಣೇಶ ಮೂರ್ತಿ ಕೂರಿಸುವವರು ಮೊದಲು ಆಯಾ ಠಾಣಾಧಿಕಾರಿ ಯಿಂದ ಅನುಮತಿ ಪಡೆಯಬೇಕು. ಆ ನಂತರ ಪೆಂಡಲ್ ಹಾಕಿದ ಮೇಲೆ ವಿದ್ಯುತ್ ಸಂಪರ್ಕ ಪಡೆಯಲು ಹೆಸ್ಕಾಂಗೆ ಅರ್ಜಿ ಕೊಟ್ಟಾಗ ಅವರು ಸ್ಥಳ ಪರಿಶೀಲಿಸುತ್ತಾರೆ. ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಅನುಮತಿ ಕಡ್ಡಾಯ
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…