ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ ಪ್ರದೀಪ್ ಮಹಾಜನ್, ಏಳನೇ ಆರೋಪಿ ಸುರೇಶ್ ಎಚ್.ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ.ಟಿ ನವೀನ್ ಕುಮಾರ್ ಅಲಿಯಾಸ್ ನವೀನ್ಗೆ ಜಾಮೀನು ದೊರೆತಿದೆ.
ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ. ಹೀಗಾಗಿ ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳ ಪರ ನ್ಯಾಯವಾದಿಗಳಾದ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದಿಸಿದ್ದರು.
11ನೇ ಆರೋಪಿ ಮೋಹನ್ ನಾಯಕ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್ “ಮೋಹನ್ ನಾಯಕ್ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್ ನಾಯಕ್. ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ” ಎಂದಿತ್ತು
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…