ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ ಪ್ರದೀಪ್ ಮಹಾಜನ್, ಏಳನೇ ಆರೋಪಿ ಸುರೇಶ್ ಎಚ್.ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ.ಟಿ ನವೀನ್ ಕುಮಾರ್ ಅಲಿಯಾಸ್ ನವೀನ್ಗೆ ಜಾಮೀನು ದೊರೆತಿದೆ.
ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಚಾರಣೆ ಮುಗಿಯದೇ ದೀರ್ಘ ಕಾಲ ಜೈಲಿನಲ್ಲಿಡುವಂತಿಲ್ಲವೆಂದು ತೀರ್ಪು ಇದೆ. ಹೀಗಾಗಿ ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳ ಪರ ನ್ಯಾಯವಾದಿಗಳಾದ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದಿಸಿದ್ದರು.
11ನೇ ಆರೋಪಿ ಮೋಹನ್ ನಾಯಕ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್ “ಮೋಹನ್ ನಾಯಕ್ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್ ನಾಯಕ್. ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ” ಎಂದಿತ್ತು
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…